'ಭಾರತ್ ಜೋಡೋ' ಯಾತ್ರೆ: ತಮಿಳು ನಾಡಿನ ಶ್ರೀಪೆರಂಬದೂರಿನಲ್ಲಿ ತಂದೆ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ರಾಹುಲ್ ಗಾಂಧಿ

ರಾಜಕೀಯ ಭವಿಷ್ಯವನ್ನು ಪುನಶ್ಚೇತನಗೊಳಿಸುವ ಉದ್ದೇಶದಿಂದ ದೇಶದ ಹಳೆಯ ಕಾಂಗ್ರೆಸ್ ಪಕ್ಷ ಇಂದು ಬುಧವಾರದಿಂದ ದೇಶಾದ್ಯಂತ 3,500 ಕಿಲೋ ಮೀಟರ್ ಸಂಚಾರ ನಡೆಸುವ 'ಭಾರತ್ ಜೋಡೋ ಯಾತ್ರೆ'ಯನ್ನು ತಮಿಳು ನಾಡಿನ ಕನ್ಯಾಕುಮಾರಿಯಿಂದ ಆರಂಭಿಸಿದೆ. 
ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಸ್ಮಾರಕವಾದ ಶ್ರೀಪೆರಂಬದೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುಷ್ಪ ನಮನ ಸಲ್ಲಿಸಿದರು
ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಸ್ಮಾರಕವಾದ ಶ್ರೀಪೆರಂಬದೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುಷ್ಪ ನಮನ ಸಲ್ಲಿಸಿದರು

ನವದೆಹಲಿ: ರಾಜಕೀಯ ಭವಿಷ್ಯವನ್ನು ಪುನಶ್ಚೇತನಗೊಳಿಸುವ ಉದ್ದೇಶದಿಂದ ದೇಶದ ಹಳೆಯ ಕಾಂಗ್ರೆಸ್ ಪಕ್ಷ ಇಂದು ಬುಧವಾರದಿಂದ ದೇಶಾದ್ಯಂತ 3,500 ಕಿಲೋ ಮೀಟರ್ ಸಂಚಾರ ನಡೆಸುವ 'ಭಾರತ್ ಜೋಡೋ ಯಾತ್ರೆ'ಯನ್ನು ತಮಿಳು ನಾಡಿನ ಕನ್ಯಾಕುಮಾರಿಯಿಂದ ಆರಂಭಿಸಿದೆ. 

ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ಧ್ರುವೀಕರಣ ವಿಷಯಗಳನ್ನಿಟ್ಟುಕೊಂಡು ಕಾಂಗ್ರೆಸ್ ಈ ಯಾತ್ರೆಯನ್ನು ಹಮ್ಮಿಕೊಂಡಿದ್ದು ಅಕ್ಟೋಬರ್ 17ರಂದು ಪಕ್ಷದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಮುನ್ನ ಪಕ್ಷದೊಳಗೆ ಆಂತರಿಕ ಭಿನ್ನಾಭಿಪ್ರಾಯದ ಹೊತ್ತಿನಲ್ಲಿ ಈ ಯಾತ್ರೆಯನ್ನು ಹಮ್ಮಿಕೊಂಡಿದೆ. 12 ರಾಜ್ಯಗಳಲ್ಲಿ 5 ತಿಂಗಳ ಕಾಲ ನಡೆಯಲಿರುವ ಈ ಯಾತ್ರೆಯ ಮೂಲಕ ದೇಶದ ಮೂಲೆ ಮೂಲೆಗಳಲ್ಲಿ ಜನರನ್ನು ತಲುಪುವುದು ಪಕ್ಷದ ಗುರಿಯಾಗಿದೆ.

ತಮ್ಮ ತಂದೆ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಆತ್ಮಹತ್ಯಾ ದಾಳಿಗೆ ಬಲಿಯಾದ ತಮಿಳು ನಾಡಿನ ಶ್ರೀಪೆರಂಬದೂರಿನಲ್ಲಿರುವ ರಾಜೀವ್ ಗಾಂಧಿ ಸ್ಮಾರಕಕ್ಕೆ ಇಂದು ಬೆಳಗ್ಗೆ ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರು ತೆರಳಿ ನಮನ ಸಲ್ಲಿಸಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದರು. ಕನ್ಯಾಕುಮಾರಿಯ ಮಹಾತ್ಮಾ ಗಾಂಧಿ ಮಂಟಪದಲ್ಲಿ ಯಾತ್ರೆಗೆ ಚಾಲನೆ ನೀಡಲಾಗುತ್ತದೆ. ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಭಾಗವಹಿಸಲಿದ್ದಾರೆ.

ರಾಹುಲ್ ಗಾಂಧಿಯವರು ತಮ್ಮ ತಂದೆಯ ಸ್ಮಾರಕ ಪಕ್ಕ ಗಿಡವೊಂದನ್ನು ನೆಟ್ಟರು. ತಮಿಳುನಾಡು ಕಾಂಗ್ರೆಸ್ ಮುಖ್ಯಸ್ಥ ಕೆ ಎಸ್ ಅಳಗಿರಿ ಮತ್ತು ಇತರ ಹಿರಿಯ ನಾಯಕರು ಗಾಂಧಿ ಜೊತೆಗಿದ್ದರು. ಆರೋಗ್ಯ ಚಿಕಿತ್ಸೆ ವಿಚಾರದಲ್ಲಿ ವಿದೇಶದಲ್ಲಿರುವ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಂದಿನ ದಿನಗಳಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ದೇಶದಲ್ಲಿ ರಾಜಕೀಯ ಸ್ಥಿತಿಗತಿ ಋಣಾತ್ಮಕತೆಯತ್ತ ಸಾಗುತ್ತಿದ್ದು, ಜನರ ನೈಜ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿಲ್ಲ, ಬೆಲೆ ಏರಿಕೆಯಂತಹ ಜನರ ಸಮಸ್ಯೆಗಳತ್ತ ಗಮನಹರಿಸುವುದರಿಂದ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಪ್ರಿಯಾಂಕಾ ವಿಡಿಯೋ ಸಂದೇಶದಲ್ಲಿ ಮನವಿ ಮಾಡಿದ್ದಾರೆ. 

ಮೆರವಣಿಗೆಯ ನಡುವೆಯೇ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಅರ್ಹ ಮತದಾರರಿಗೆ ಮತ ಹಾಕಲು ಅನುಕೂಲವಾಗುವಂತೆ ನೋಡಿಕೊಳ್ಳಲಾಗುವುದು ಎಂದು ಪಕ್ಷ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com