ಬ್ರಿಟನ್ ರಾಣಿ ಎಲಿಜಬೆತ್ II ನಿಧನ: ಭಾರತದಾದ್ಯಂತ ಸೆ.11ರಂದು ಶೋಕಾಚರಣೆ!

ಬ್ರಿಟನ್ ರಾಣಿ ಎಲಿಜಬೆತ್ II ಅವರ ನಿಧನದ ಹಿನ್ನೆಲೆಯಲ್ಲಿ ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.
ರಾಣಿ ಎಲಿಜಬೆತ್ II
ರಾಣಿ ಎಲಿಜಬೆತ್ II
Updated on

ನವದೆಹಲಿ: ಬ್ರಿಟನ್ ರಾಣಿ ಎಲಿಜಬೆತ್ II ಅವರ ನಿಧನದ ಹಿನ್ನೆಲೆಯಲ್ಲಿ ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.

ಗೃಹ ವ್ಯವಹಾರಗಳ ಸಚಿವಾಲಯವು, 'ಕ್ವೀನ್ ಎಲಿಜಬೆತ್ II, ಯುನೈಟೆಡ್ ಕಿಂಗ್‌ಡಮ್ ಆಫ್ ಗ್ರೇಟ್ ಬ್ರಿಟನ್ ಮತ್ತು ಉತ್ತರ ಐರ್ಲೆಂಡ್ 8 ನೇ ಸೆಪ್ಟೆಂಬರ್ 2022 ರಂದು ನಿಧನರಾದರು. ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಭಾರತ ಸರ್ಕಾರವು ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ನಿರ್ಧರಿಸಿದೆ ಎಂದು ಹೇಳಿದೆ.

ಶೋಕಾಚರಣೆಯ ದಿನದಂದು, ಭಾರತದಾದ್ಯಂತ ರಾಷ್ಟ್ರಧ್ವಜವನ್ನು ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ಅರ್ಧಕ್ಕೆ ಹಾರಿಸಲಾಗುತ್ತದೆ ಮತ್ತು ದಿನದಂದು ಯಾವುದೇ ಅಧಿಕೃತ ಮನರಂಜನೆ ಇರುವುದಿಲ್ಲ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಯುಕೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ರಾಣಿ ಎಲಿಜಬೆತ್ II ಗುರುವಾರ ತಮ್ಮ 96ನೇ ವಯಸ್ಸಿನಲ್ಲಿ ನಿಧನರಾದ ಹಿನ್ನೆಲೆ ಜಗತ್ತಿನಾದ್ಯಂತ ಗಣ್ಯರು ಸಂತಾಪ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com