ಶೀಘ್ರದಲ್ಲೇ ರಾಷ್ಟ್ರೀಯ ಪಕ್ಷ ಸ್ಥಾಪನೆ: ಊಹಾಪೋಹಗಳಿಗೆ ಕೆಸಿಆರ್ ತೆರೆ!

ಶೀಘ್ರದಲ್ಲಿಯೇ ನೂತನ ರಾಷ್ಟ್ರೀಯ ಪಕ್ಷ ಸ್ಥಾಪಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಭಾನುವಾರ ಸ್ಪಷ್ಟಪಡಿಸಿದ್ದು, ಈ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಕೆ. ಚಂದ್ರಶೇಖರ ರಾವ್
ಕೆ. ಚಂದ್ರಶೇಖರ ರಾವ್

ಹೈದ್ರಾಬಾದ್: ಶೀಘ್ರದಲ್ಲಿಯೇ ನೂತನ ರಾಷ್ಟ್ರೀಯ ಪಕ್ಷ ಸ್ಥಾಪಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಭಾನುವಾರ ಸ್ಪಷ್ಟಪಡಿಸಿದ್ದು, ಈ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

'ತೆಲಂಗಾಣ ಚಳವಳಿ ಆರಂಭಕ್ಕೂ ಮುನ್ನ ನಾವು ಮಾಡಿದಂತೆ ಬುದ್ಧಿಜೀವಿಗಳು, ಅರ್ಥಶಾಸ್ತ್ರಜ್ಞರು ಮತ್ತು ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಸುದೀರ್ಘ ಚರ್ಚೆಯ ನಂತರ ಪರ್ಯಾಯ ರಾಷ್ಟ್ರೀಯ ಪಕ್ಷ ಕಾರ್ಯಸೂಚಿಯಲ್ಲಿ ಒಮ್ಮತವಿದೆ' ಎಂದು ರಾವ್ ಅವರ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ.

'ಅತಿ ಶೀಘ್ರದಲ್ಲಿಯೇ ರಾಷ್ಟ್ರೀಯ ಪಕ್ಷ ಸ್ಥಾಪಿಸಲಾಗುವುದು ಮತ್ತು ಅದರ ನೀತಿ ರೂಪಣೆ ಕೆಲಸ ನಡೆಯುತ್ತಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com