ಅಯೋಧ್ಯೆ: 2024ರ ಮಕರಸಂಕ್ರಾಂತಿಯಂದು ಹೊಸ ದೇವಾಲಯದ ಗರ್ಭಗುಡಿಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ
ಲಖನೌ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಗರ್ಭಗುಡಿಯಲ್ಲಿ ಜನವರಿ 14, 2024ರ ಮಕರಸಂಕ್ರಾಂತಿಯಂದು ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.
2024 ರಲ್ಲಿ 'ಮಕರಸಂಕ್ರಾಂತಿ' ದಿನದಂದು ಭಗವಾನ್ ರಾಮ ಮತ್ತು ಅವರ ಸಹೋದರರ ವಿಗ್ರಹಗಳನ್ನು 'ಗರ್ಭ ಗುಡಿ'ಯಲ್ಲಿ ಪ್ರತಿಷ್ಠಾಪಿಸಲಾಗುವುದು ಎಂದು ದೇವಾಲಯದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ತಿಳಿಸಿದ್ದಾರೆ.
ಮೂರು ಅಂತಸ್ತಿನ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ನೆಲ ಮಹಡಿಯನ್ನು ಡಿಸೆಂಬರ್ 2023 ರ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ರೈ ಹೇಳಿದ್ದಾರೆ.
ಸೋಮವಾರ ರಾತ್ರಿ ಅಯೋಧ್ಯೆಯ ಸರ್ಕ್ಯೂಟ್ ಹೌಸ್ನಲ್ಲಿ ನಿವೃತ್ತ ಐಎಎಸ್ ಅಧಿಕಾರಿ ನೃಪೇಂದ್ರ ಮಿಶ್ರಾ ನೇತೃತ್ವದ ದೇವಾಲಯ ನಿರ್ಮಾಣ ಸಮಿತಿಯೊಂದಿಗೆ ಸಭೆ ನಡೆಸಿದ ನಂತರ ಚಂಪತ್ ರೈ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು.
ಇದಲ್ಲದೆ, ಮಂದಿರ ನಿರ್ಮಾಣದ ವೆಚ್ಚವನ್ನು 1800 ಕೋಟಿ ರೂ. ಗೆ ಪರಿಷ್ಕರಿಸಲಾಗಿದೆ. ಚರ್ಚೆಯ ನಂತರ ದೇವಾಲಯ ನಿರ್ಮಾಣದ ವೆಚ್ಚವನ್ನು 1800 ಕೋಟಿ ರೂ. ಗೆ ಪರಿಷ್ಕರಿಸಲಾಗಿದೆ. ಅಲ್ಲದೆ ವೆಚ್ಚವು ಇನ್ನೂ ಹೆಚ್ಚಾಗಬಹುದು ಎಂದು ಅವರು ತಿಳಿಸಿದ್ದಾರೆ.
ಈ ಹಿಂದೆ ದೇವಾಲಯದ ವೆಚ್ಚ ಸುಮಾರು 400 ಕೋಟಿ ಎಂದು ಅಂದಾಜಿಸಲಾಗಿತ್ತು.
ದೇವಸ್ಥಾನದ ಟ್ರಸ್ಟ್ನಲ್ಲಿ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮತ್ತು ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ರೈ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ