ಸರ್ಕಾರವನ್ನು ಉರುಳಿಸಲು ಪಂಜಾಬ್‌ನ 10 ಎಎಪಿ ಶಾಸಕರನ್ನು ಬಿಜೆಪಿ ಸಂಪರ್ಕಿಸಿದೆ: ಅರವಿಂದ್ ಕೇಜ್ರಿವಾಲ್

ಪಂಜಾಬ್ ಸರ್ಕಾರವನ್ನು ಉರುಳಿಸಲು ಬಿಜೆಪಿ ತನ್ನ ಆಮ್ ಆದ್ಮಿ ಪಕ್ಷದ (ಎಎಪಿ) 10 ಶಾಸಕರನ್ನು ಸಂಪರ್ಕಿಸಿದೆ ಎಂದು ಅರವಿಂದ್ ಕೇಜ್ರಿವಾಲ್ ಇಂದು (ಬುಧವಾರ) ಆರೋಪಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

ನವದೆಹಲಿ: ಪಂಜಾಬ್ ಸರ್ಕಾರವನ್ನು ಉರುಳಿಸಲು ಬಿಜೆಪಿ ತನ್ನ ಆಮ್ ಆದ್ಮಿ ಪಕ್ಷದ (ಎಎಪಿ) 10 ಶಾಸಕರನ್ನು ಸಂಪರ್ಕಿಸಿದೆ ಎಂದು ಅರವಿಂದ್ ಕೇಜ್ರಿವಾಲ್ ಇಂದು (ಬುಧವಾರ) ಆರೋಪಿಸಿದ್ದಾರೆ.

'ನಮ್ಮ 10 ಶಾಸಕರನ್ನು ಪಂಜಾಬ್‌ನಲ್ಲಿ ಬಿಜೆಪಿ ಸಂಪರ್ಕಿಸಿದೆ. ಅವರು ಶಾಸಕರನ್ನು ಖರೀದಿಸುತ್ತಿದ್ದಾರೆ ಮತ್ತು ಸರ್ಕಾರಗಳನ್ನು ಬೀಳಿಸುತ್ತಿದ್ದಾರೆ' ಎಂದು ಅರವಿಂದ್ ಕೇಜ್ರಿವಾಲ್ ಹೇಳಿದರು.

ಬಿಜೆಪಿಯು ದೆಹಲಿಯಲ್ಲಿ 'ಆಪರೇಷನ್ ಕಮಲ' ಮಾಡಲು ಪ್ರಯತ್ನಿಸುತ್ತಿದೆ ಮತ್ತು ಶಾಸಕರನ್ನು ಪಕ್ಷಾಂತರಕ್ಕೆ ಪ್ರೇರೇಪಿಸುತ್ತದೆ ಎಂದು ಕೇಜ್ರಿವಾಲ್ ಮತ್ತು ಎಎಪಿ ಇತ್ತೀಚೆಗೆ ಆರೋಪಿಸಿದ್ದರು.
ದೆಹಲಿಯಲ್ಲಿ ವಿಫಲವಾಗಿರುವ ಬಿಜೆಪಿ ಪಂಜಾಬ್‌ನತ್ತ ತನ್ನ ಗಮನವನ್ನು ಹರಿಸಿದೆ ಎಂದು ಪಕ್ಷ ಹೇಳಿಕೊಂಡಿದೆ.

ಪಕ್ಷದ ದೊಡ್ಡ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಬರುವಂತೆ ಎಎಪಿ ಶಾಸಕರನ್ನು ಕೇಳಲಾಗಿದೆ ಮತ್ತು ಪಕ್ಷವನ್ನು ಬದಲಾಯಿಸಲು ಕೋಟಿ ರೂಪಾಯಿಗಳ ಆಫರ್ ಮಾಡಲಾಗಿದೆ ಎಂದು ಪಂಜಾಬ್ ಸಚಿವ ಹರ್ಪಾಲ್ ಚೀಮಾ ಆರೋಪಿಸಿದ್ದಾರೆ.

'ದೆಹಲಿಗೆ ಬನ್ನಿ, ಬಿಜೆಪಿಯ ದೊಡ್ಡ ನಾಯಕರನ್ನು ಭೇಟಿಯಾಗುವಂತೆ ಮಾಡುತ್ತೇನೆ' ಎಂದು ಪಕ್ಷದ ಶಾಸಕರೊಬ್ಬರು ಸ್ವೀಕರಿಸಿದ ಕರೆಗಳಲ್ಲಿ ಒಂದನ್ನು ಉಲ್ಲೇಖಿಸಿ ಚೀಮಾ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು ಬಿಜೆಪಿಯು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಮತ್ತು ಬಿಜೆಪಿಗೆ ಸೇರಲು ತನ್ನ ದೆಹಲಿಯ ಕೆಲವು ಶಾಸಕರಿಗೆ 'ತಲಾ 20 ಕೋಟಿ' ನೀಡುವುದಾಗಿ ಹೇಳಿದೆ ಎಂದು ಆರೋಪಿಸಿತು.

'ಬಿಜೆಪಿ ಪಕ್ಷ ಬದಲಿಸಲು ಪ್ರತಿ ಶಾಸಕರಿಗೆ ₹ 25 ಕೋಟಿ ನೀಡುತ್ತಿದೆ. ಕರ್ನಾಟಕದಲ್ಲಿ ಆಪರೇಷನ್ ಕಮಲ ಯಶಸ್ವಿಯಾಗಿರಬಹುದು. ಆದರೆ, ದೆಹಲಿ ಶಾಸಕರು ದೃಢವಾಗಿ ಉಳಿದು ಬಿಜೆಪಿ ಕಾರ್ಯಾಚರಣೆಯನ್ನು ವಿಫಲಗೊಳಿಸಿದ್ದಾರೆ. ಪಂಜಾಬ್‌ನಲ್ಲಿ ಸರ್ಕಾರ ಬದಲಾವಣೆಯಾದರೆ, ನಿಮಗೆ (ಶಾಸಕರು) ದೊಡ್ಡ ಬಡ್ತಿಗಳು, ಹುದ್ದೆಗಳನ್ನು ನೀಡಲಾಗುವುದು ಎಂದು ಭಗವಂತ್ ಮಾನ್ ನೇತೃತ್ವದ ಸರ್ಕಾರವನ್ನು ಉರುಳಿಸಲು ಪಂಜಾಬ್ ಶಾಸಕರಿಗೆ ಹಲವಾರು ಕರೆಗಳು ಬಂದಿವೆ' ಎಂದು ಚೀಮಾ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಎಎಪಿ ಮಾಡಿರುವ ಆರೋಪವನ್ನು ಬಿಜೆಪಿ ತಳ್ಳಿಹಾಕಿದೆ.

'ಪಂಜಾಬ್ ಸಚಿವ ಹರ್ಪಾಲ್ ಚೀಮಾ ಅವರು ಬಿಜೆಪಿ ವಿರುದ್ದ ರಾಜ್ಯ ಸರ್ಕಾರವನ್ನು ಪತನಗೊಳಿಸಲು ಯತ್ನಿಸುತ್ತಿದೆ ಎಂಬ ಆಧಾರರಹಿತ ಆರೋಪವು ಪಂಜಾಬ್‌ನಲ್ಲಿ ಎಎಪಿ ದೊಡ್ಡ ವಿಭಜನೆಗೆ ಕಾರಣವಾಗುತ್ತಿದೆ ಎಂಬುದನ್ನು ತೋರಿಸುತ್ತದೆ. ಕೇಜ್ರಿವಾಲ್ ಅವರ ಹಸ್ತಕ್ಷೇಪದಿಂದ ಪಕ್ಷವು ಛಿದ್ರವಾಗುವ ಹಂತದಲ್ಲಿದೆ' ಎಂದು ಬಿಜೆಪಿಯ ಸುಭಾಷ್ ಶರ್ಮಾ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com