ರಾಂಚಿ: 50 ಪ್ರಯಾಣಿಕರಿದ್ದ ಬಸ್ ಸೇತುವೆ ಮೇಲಿಂದ ಬಿದ್ದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಜಾರ್ಖಂಡ್ ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ: ಬಿಹಾರದಿಂದ ಸಾರಾಯಿ ಹುಡುಕಿಕೊಂಡು ಬರುವ 'ಕುಡುಕರಿಗೆ' ಪ್ರವೇಶ ನಿಷೇಧಿಸಿದ ಜಾರ್ಖಂಡ್ ಗ್ರಾಮ!
ಗಿರಿದಿಹ್ ಜಿಲ್ಲೆಯಿಂದ ರಾಂಚಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಸೇತುವೆ ತಡೆ ಕಂಬಿಯನ್ನು ಮುರಿದು, ಸಿವಾನ್ನೆ ನದಿಯ ಒಣ ಪ್ರದೇಶಕ್ಕೆ ಬಿದ್ದಿದೆ ಎಂದು ತತಿಜಾರಿಯಾ ಪೊಲೀಸ್ ಠಾಣೆ ಪ್ರದೇಶದ ಪೊಲೀಸ್ ಅಧೀಕ್ಷಕ ಮನೋಜ್ ರತನ್ ಚೋಥೆ ಹೇಳಿದ್ದಾರೆ.
ಕೆಲವು ಪ್ರಯಾಣಿಕರು, ಬಸ್ ನಲ್ಲೇ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೂ ನಾಲ್ವರು ಹಜಾರಿಬಾಗ್ ನ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಆರ್ ಐಎಂಎಸ್) ಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತಿದೆ.
ಒಂದು ವೇಳೆ ಬಸ್ ನದಿಯ ಮಧ್ಯ ಭಾಗದಲ್ಲಿ ನೀರಿದ್ದ ಭಾಗಕ್ಕೆ ಬಿದ್ದಿದ್ದರೆ, ಹೆಚ್ಚು ಹಾನಿ ಉಂಟಾಗುತ್ತಿತ್ತು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
Advertisement