ಮುಕೇಶ್ ಅಂಬಾನಿ
ದೇಶ
ಕೇರಳ: ಗುರುವಾಯೂರು ದೇವಾಲಯಕ್ಕೆ ಮುಕೇಶ್ ಅಂಬಾನಿ ಭೇಟಿ: 1.5 ಕೋಟಿ ರೂಪಾಯಿ ದೇಣಿಗೆ!
ತಿರುವನಂತಪುರಂ: ಇತ್ತೀಚಿಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ 1.5 ಕೋಟಿ ರೂಪಾಯಿ ದೇಣಿಗೆ ನೀಡಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ, ಇದೀಗ ಕೇರಳದ ಪ್ರಸಿದ್ಧ ದೇವಾಲಯ ಗುರುವಾಯೂರು ದೇವಾಲಯಕ್ಕೂ 1.51 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ತಿರುವನಂತಪುರಂ: ಇತ್ತೀಚಿಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ 1.5 ಕೋಟಿ ರೂಪಾಯಿ ದೇಣಿಗೆ ನೀಡಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ, ಇದೀಗ ಕೇರಳದ ಪ್ರಸಿದ್ಧ ದೇವಾಲಯ ಗುರುವಾಯೂರು ದೇವಾಲಯಕ್ಕೂ 1.51 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಅನಂತ್ ಅಂಬಾನಿ ನಿಶ್ಚಿತಾರ್ಥ ಮಾಡಿಕೊಂಡಿರುವ ರಾಧಿಕಾ ಮರ್ಚೆಂಟ್ ಜೊತೆಗೆ ಶನಿವಾರ ಗುರುವಾಯೂರು ದೇವಸ್ಥಾನಕ್ಕೆ ಭೇಟಿ ನೀಡಿದ ಮುಕೇಶ್ ಅಂಬಾನಿ, ದೇವರ ದರ್ಶನ ಪಡೆದು, ಅನ್ನದಾನ ನಿಧಿಗಾಗಿ ಒಂದೂವರೆ ಕೋಟಿ ರೂಪಾಯಿ ದೇಣಿಗೆ ನೀಡಿರುವ ವಿಚಾರವನ್ನು ದೇವಾಲಯದ ಆಡಳಿತ ಮಂಡಳಿಯ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಈ ವೇಳೆ ಸುಮಾರು 50 ಕೋಟಿ ರೂ. ವೆಚ್ಚದ ಹೊಸ ವೈದ್ಯಕೀಯ ಕೇಂದ್ರ ನಿರ್ಮಿಸುವ ಯೋಜನೆಗೆ ನೆರವು ನೀಡುವಂತೆ ದೇವಾಲಯ ಆಡಳಿತ ಮಂಡಳಿ ಮುಂದಿಟ್ಟ ಬೇಡಿಕೆಯನ್ನು ಪರಿಗಣಿಸುವುದಾಗಿ ಅವರು ಹೇಳಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ