ಹಿಮಾಚಲ ಪ್ರದೇಶ: ಪ್ರವಾಸಿ ಬಸ್ಸು ಕಂದಕಕ್ಕೆ ಉರುಳಿ ಬಿದ್ದು 7 ಮಂದಿ ಸಾವು, 10 ಮಂದಿಗೆ ಗಾಯ

ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಟೆಂಪೋ ಟ್ರಾವೆಲರ್ ಕಮರಿಗೆ ಬಿದ್ದ ಪರಿಣಾಮ ಏಳು ಮಂದಿ ಮೃತಪಟ್ಟು, 10 ಮಂದಿ ಗಾಯಗೊಂಡಿರುವ ಘಟನೆ ಕಳೆದ ರಾತ್ರಿ ನಡೆದಿದೆ. 
ಕಂದಕಕ್ಕೆ ಉರುಳಿಬಿದ್ದ ವಾಹನ
ಕಂದಕಕ್ಕೆ ಉರುಳಿಬಿದ್ದ ವಾಹನ

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಟೆಂಪೋ ಟ್ರಾವೆಲರ್ ಕಮರಿಗೆ ಬಿದ್ದ ಪರಿಣಾಮ ಏಳು ಮಂದಿ ಮೃತಪಟ್ಟು, 10 ಮಂದಿ ಗಾಯಗೊಂಡಿರುವ ಘಟನೆ ಕಳೆದ ರಾತ್ರಿ ನಡೆದಿದೆ. 

ಕುಲುವಿನ ಬಂಜಾರ್ ಕಣಿವೆಯ ಘಿಯಾಗಿ ಪ್ರದೇಶದಲ್ಲಿ NH-305 ನಲ್ಲಿ ನಿನ್ನೆ ರಾತ್ರಿ 8:30 ಕ್ಕೆ ಪ್ರವಾಸಿ ವಾಹನವು ಬಂಡೆಯಿಂದ ಉರುಳಿದ ಪರಿಣಾಮ 7 ಜನರು ಮೃತಪಟ್ಟಿದ್ದಾರೆ.  10 ಮಂದಿ ಗಾಯಗೊಂಡಿದ್ದಾರೆ. 5 ಗಾಯಾಳುಗಳನ್ನು ವಲಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ, ಕುಲು ಮತ್ತು 5 ಜನರು ಬಂಜಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗುರುದೇವ್ ಸಿಂಗ್ ಎಸ್ಪಿ ತಿಳಿಸಿದ್ದಾರೆ. 

ಬಂಜಾರ್‌ನ ಬಿಜೆಪಿ ಶಾಸಕ ಸುರೇಂದರ್ ಶೌರಿ ಅವರು ಇಂದು ಮಧ್ಯರಾತ್ರಿ 12.45 ರ ಸುಮಾರಿಗೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ಫೇಸ್‌ಬುಕ್ ಲೈವ್‌ನಲ್ಲಿ ವೀಡಿಯೊವನ್ನು ಸ್ಟ್ರೀಮ್ ಮಾಡಿದ್ದಾರೆ, ಬಂಜಾರ್ ಉಪವಿಭಾಗದ ಘಿಯಾಘಿ ಬಳಿ ಸಂಭವಿಸಿದ ಅಪಘಾತದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದಾರೆ.

ಗಾಯಾಳುಗಳನ್ನು ಮೊದಲು ಬಂಜಾರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿಂದ ಅವರನ್ನು ಪ್ರಥಮ ಚಿಕಿತ್ಸೆ ನೀಡಿದ ನಂತರ ಕುಲು ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತಪಟ್ಟವರು ರಾಜಸ್ಥಾನ, ಮಧ್ಯಪ್ರದೇಶ, ಹರಿಯಾಣ ಮತ್ತು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳ ನಿವಾಸಿಗಳು ಎಂದು ಬಂಜಾರ್ ಶಾಸಕರು ತಿಳಿಸಿದ್ದು  ಪ್ರಯಾಣಿಕರನ್ನು ಗುರುತಿಸಲಾಗಿದೆ. 

ದಟ್ಟ ಕತ್ತಲೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆ ನಡೆಸಿದ ಜಿಲ್ಲಾಡಳಿತ ಮತ್ತು ಸ್ಥಳೀಯರಿಗೆ ಶೌರಿ ಕೃತಜ್ಞತೆ ಸಲ್ಲಿಸಿದರು. ಸುಮಾರು ಒಂದು ವಾರದ ಹಿಂದೆ, ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದ ಮತ್ತೊಂದು ಅಪಘಾತದಲ್ಲಿ ಏಳು ಜನರು ಮೃತಪಟ್ಟಿದ್ದರು. ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಸೇತುವೆಯಿಂದ ಕೆಳಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com