ಮಹಾರಾಷ್ಟ್ರದಲ್ಲಿ ಡಬಲ್ ದುರಂತ: ಪ್ರೇಯಸಿಗೆ ಗುಂಡಿಕ್ಕಿ ಕೊಂದು ಪರಾರಿಯಾಗುತ್ತಿದ್ದ ಯುವಕ ಸೇನಾ ಟ್ರಕ್‌ಗೆ ಬಲಿ

ಆಘಾತಕಾರಿ ಡಬಲ್ ದುರಂತದಲ್ಲಿ, ಬೋಯ್ಸರ್ ಪಟ್ಟಣದಲ್ಲಿ ಯುವತಿಯನ್ನು ಆಕೆಯ ಪ್ರಿಯಕರ ಗುಂಡಿಕ್ಕಿ ಕೊಂದು, ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಮಿಲಿಟರಿ ಟ್ರಕ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಾಲ್ಘರ್(ಮಹಾರಾಷ್ಟ್ರ): ಆಘಾತಕಾರಿ ಡಬಲ್ ದುರಂತದಲ್ಲಿ, ಬೋಯ್ಸರ್ ಪಟ್ಟಣದಲ್ಲಿ ಯುವತಿಯನ್ನು ಆಕೆಯ ಪ್ರಿಯಕರ ಗುಂಡಿಕ್ಕಿ ಕೊಂದು, ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಮಿಲಿಟರಿ ಟ್ರಕ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ಮಧ್ಯಾಹ್ನ ನೇಹಾ ಮಹತೋ(21) ಮತ್ತು ಆಕೆಯ ಗೆಳೆಯ ಕೃಷ್ಣ ಯಾದವ್(25) ಅವರು ಸಾರಾವಳಿಯ ಖಾಸಗಿ ಆಸ್ಪತ್ರೆಯ ಬಳಿ ರಸ್ತೆಯಲ್ಲಿ ಇಬ್ಬರ ನಡುವೆ ತೀವ್ರ ಜಗಳ ನಡೆದಿದೆ. ಈ ವೇಳೆ ಇದ್ದಕ್ಕಿದ್ದಂತೆ, ಯಾದವ್ ರಿವಾಲ್ವರ್ ಅನ್ನು ಹೊರತೆಗೆದು ಪಾಯಿಂಟ್-ಬ್ಲಾಂಕ್ ರೇಂಜ್ ನಿಂದ ನೇಹಾ ಅವರ ತಲೆಗೆ ಗುಂಡು ಹಾರಿಸಿದ್ದಾನೆ. ನೇಹಾ ಸ್ಥಳದಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಆಘಾತಕ್ಕೊಳಗಾದ ಸ್ಥಳೀಯರು ಅಲ್ಲಿಗೆ ಧಾವಿಸುತ್ತಿದ್ದಂತೆ, ಯಾದವ್ ಭಯಭೀತರಾಗಿ ಸ್ಥಳದಿಂದ ಓಡಿಹೋಗಿದ್ದಾರೆ. ಆದರೆ ಕೇವಲ ನೂರು ಮೀಟರ್ ದೂರದಲ್ಲಿ ಮಿಲಿಟರಿ ವಾಹನಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

ಕೂಡಲೇ ಆತನನ್ನು ಬೋಯಿಸರ್ ಪೊಲೀಸರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು, ಆದರೆ ಅಲ್ಲಿ ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಬೋಯಿಸರ್ ಪೊಲೀಸರು ಯಾದವ್‌ನಿಂದ ಗನ್ ವಶಪಡಿಸಿಕೊಂಡಿದ್ದಾರೆ ಮತ್ತು ಅದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಇದು ಅಪಘಾತ ಅಥವಾ ಆತ್ಮಹತ್ಯೆಯೇ ಎಂದು ಖಚಿತಪಡಿಸಿಕೊಳ್ಳಲು ಅವರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.

ಪೊಲೀಸ್ ಪ್ರಾಥಮಿಕ ತನಿಖೆಯ ಪ್ರಕಾರ, ಯಾದವ್ ಮತ್ತು ನೇಹಾ ಒಂದು ವರ್ಷದಿಂದ ಪ್ರೀತಿಸುತ್ತಿದ್ದರು. ಆದರೆ ಯಾದವ್, ನೇಹಾಳನ್ನು ಮದುವೆಯಾಗಲು ನಿರಾಕರಿಸಿದ್ದ ಎನ್ನಲಾಗಿದೆ. ಮದುವೆಯಾಗುವಂತೆ ನೇಹಾಳ ಕುಟುಂಬ ಯಾದವ್ ಮೇಲೆ ಒತ್ತಡ ಹಾಕಿತ್ತು ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com