ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ತರೂರ್ ಪ್ರಣಾಳಿಕೆಯಲ್ಲಿ ಭಾರತದ ಭೂಪಟವೇ ಛಿದ್ರ!

ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಭಾಗಗಳಿಲ್ಲದ...
ಶಶಿ ತರೂರ್
ಶಶಿ ತರೂರ್

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಭಾಗಗಳಿಲ್ಲದ ಭಾರತದ ನಕ್ಷೆ ಭಾರೀ ಟೀಕೆಗೆ ಗುರಿಯಾಗಿದೆ.

ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್‌ನಲ್ಲಿ ಇದನ್ನು “ದೊಡ್ಡ ಅವಿವೇಕ” “ನಾಚಿಕೆಗೇಡಿನ” ಸಂಗತಿ ಎಂದು ಕರೆದಿದ್ದಾರೆ. ಕೆಲವರು ಅವರನ್ನು “ವಿಭಜಕ” ಎಂದು ಆರೋಪಿಸಿದ್ದಾರೆ. ಶಶಿ ತರೂರ್ ಅವರು ಟ್ವಿಟರ್ ನಲ್ಲಿ 8 ಮಿಲಿಯನ್‌ಗಿಂತಲೂ ಹೆಚ್ಚು ಹಿಂಬಾಲಕರನ್ನು ಹೊಂದಿದ್ದಾರೆ.

ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರು ಭಾರತ ಭೂಪಟದ ವಿಚಾರದಲ್ಲಿ ವಿವಾದಕ್ಕೆ ಸಿಲುಕಿದ್ದಾರೆ.

‘ಥಿಂಕ್ ಟುಮಾರೊ, ಥಿಂಕ್ ತರೂರ್’ ಎಂಬ ಅಡಿಬರಹದೊಂದಿಗೆ ತಮ್ಮ ಪ್ರಣಾಳಿಕೆಯ ಕಿರುಪುಸ್ತಕದಲ್ಲಿ, ಅವರು ಭಾರತದಾದ್ಯಂತ ಇರುವ ಕಾಂಗ್ರೆಸ್ ಘಟಕಗಳನ್ನು ಪ್ರತಿನಿಧಿಸುವ ಚುಕ್ಕೆಗಳ ಜಾಲವನ್ನು ಹೊಂದಿರುವ ನಕ್ಷೆಯನ್ನು ಬಳಸಿದ್ದಾರೆ. ಇದು ಪಾಕಿಸ್ತಾನ ಮತ್ತು ಚೀನಾ ಆಕ್ರಮಿಸಿಕೊಂಡಿರುವ ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ಭಾಗಗಳನ್ನು ಒಳಗೊಂಡಿರುವ ಭಾರತದ ಅಧಿಕೃತ ನಕ್ಷೆಗಿಂತ ಭಿನ್ನವಾಗಿದೆ.

ಕಾಂಗ್ರೆಸ್ ಚುನಾವಣೆಯಲ್ಲಿ, ಶಶಿ ತರೂರ್ ಅವರು ಪಕ್ಷದ ರಾಜ್ಯಸಭಾ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಮುಖ ಎದುರಾಳಿಯಾಗಿದ್ದಾರೆ. ಅವರು ಗಾಂಧಿಯವರ ಬೆಂಬಲದಿಂದ ಮುಂಚೂಣಿಯಲ್ಲಿದ್ದಾರೆ. ಜಾರ್ಖಂಡ್ ಮಾಜಿ ಸಚಿವ ಕೆಎನ್ ತ್ರಿಪಾಠಿ ಅವರು ಅಕ್ಟೋಬರ್ 17 ರಂದು ನಡೆಯುವ ಚುನಾವಣೆಗೆ ಮೂರನೇ ಅಭ್ಯರ್ಥಿಯಾಗಿದ್ದು, ಎರಡು ದಿನಗಳ ನಂತರ ಫಲಿತಾಂಶ ಪ್ರಕಟಿಸಲಾಗುತ್ತಿದೆ.

20 ವರ್ಷಗಳ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಗಾಂಧಿಯೇತರ ಸದಸ್ಯರು ಚುನಾವಣಾ ಕಣದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com