ಐಐಟಿ ಮದ್ರಾಸ್ ವಿದ್ಯಾರ್ಥಿ ಆತ್ಮಹತ್ಯೆ: ಈ ವರ್ಷದಲ್ಲಿ ಮೂರನೇ ಪ್ರಕರಣ

ಮದ್ರಾಸ್ ನ ಭಾರತೀಯ ತಂತ್ರಜ್ಞಾನ ಸಂಸ್ಥೆ -ಐಐಟಿಯ ಪಿಹೆಚ್ ಡಿ ವಿದ್ಯಾರ್ಥಿಯೊಬ್ಬ ತಮಿಳುನಾಡಿನ ವಲಚೇರಿಯಲ್ಲಿರುವ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಲಚೇರಿ: ಮದ್ರಾಸ್ ನ ಭಾರತೀಯ ತಂತ್ರಜ್ಞಾನ ಸಂಸ್ಥೆ -ಐಐಟಿಯ ಪಿಹೆಚ್ ಡಿ ವಿದ್ಯಾರ್ಥಿಯೊಬ್ಬ ತಮಿಳುನಾಡಿನ ವಲಚೇರಿಯಲ್ಲಿರುವ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ.

ಪಶ್ಚಿಮ ಬಂಗಾಳದ 32 ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದು, ಈ ವರ್ಷದಲ್ಲಿ ಇದು ಐಐಟಿ ಮದ್ರಾಸ್ ನಲ್ಲಿ ಸಂಭವಿಸಿದ ಮೂರನೇ ಪ್ರಕರಣವಾಗಿದೆ. 2018ರಿಂದ ಒಟ್ಟು 11 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ.

'' ನನ್ನನ್ನು ಕ್ಷಮಿಸಿ, ಚೆನ್ನಾಗಿಲ್ಲ ಅಂತಾ ಮಾರ್ಚ್ 1 ರಂದು ಮೃತ ವಿದ್ಯಾರ್ಥಿ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ. ಈ ಸ್ಟೇಟಸ್ ನೋಡಿದ ಆತನ ಸ್ನೇಹಿತರು, ಆತನ ಮನೆಗೆ ಹೋದಾಗ, ಸಚಿನ್ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದ. ಈ ಸಂಬಂಧ ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ. 

ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ರಾಯಪೇಟೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.  ಈ ಸಾವಿನ ಕುರಿತು ಐಐಟಿ ಮದ್ರಾಸ್ ಸಂತಾಪ ವ್ಯಕ್ತಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com