ತಮಿಳುನಾಡು: ಧಾರ್ಮಿಕ ವಿಧಿವಿಧಾನಗಳಲ್ಲಿ ತೊಡಗಿದ್ದ ಐವರು ಅರ್ಚಕರು ನೀರಿನಲ್ಲಿ ಮುಳುಗಿ ಸಾವು

ಧಾರ್ಮಿಕ ವಿಧಾನಗಳಲ್ಲಿ ತೊಡಗಿದ್ದ 5 ಅರ್ಚಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೂವರಸನ್ ಪೇಟೆಯಲ್ಲಿ ನಡೆದಿದೆ. 
ಧಾರ್ಮಿಕ ವಿಧಿವಿಧಾನಗಳಲ್ಲಿ ತೊಡಗಿದ್ದ ಅರ್ಚಕರು
ಧಾರ್ಮಿಕ ವಿಧಿವಿಧಾನಗಳಲ್ಲಿ ತೊಡಗಿದ್ದ ಅರ್ಚಕರು
Updated on

ಮೂವರಸನ್: ಧಾರ್ಮಿಕ ವಿಧಾನಗಳಲ್ಲಿ ತೊಡಗಿದ್ದ 5 ಅರ್ಚಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೂವರಸನ್ ಪೇಟೆಯಲ್ಲಿ ನಡೆದಿದೆ. 

25 ಮಂದಿ ಅರ್ಚಕರ ಪೈಕಿ 5 ಮಂದಿ ಸಾವನ್ನಪ್ಪಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ 5 ಮೃತರನ್ನು ಸೂರ್ಯ (24) ರಾಘವನ್ (22) ಯೋಗೇಶ್ವರನ್ (23) ವನೀಶ್ (20) ರಾಘವನ್ (18) ಎಂದು ಗುರುತಿಸಲಾಗಿದೆ. ಈ ಅರ್ಚಕರ ತಂಡ ಮೂವರಸನ್ ಪೇಟ್ ನಲ್ಲಿನ ಧರ್ಮಲಿಂಗೇಶ್ವರ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

 
ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಈ 25 ಮಂದಿ ಅರ್ಚಕರು ಕಲ್ಯಾಣಿ/ ನೀರಿರುವ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಏಕಾಏಕಿ 5 ಮಂದಿ ನೀರಿನಲ್ಲಿ ಮುಳುಗಿದ್ದರು. ಮಾಹಿತಿ ಪಡೆದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕಳಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com