ನವದೆಹಲಿ: ಜಾರ್ಖಂಡ್ ನಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದಡಿ ರಾಷ್ಟ್ರೀಯ ತನಿಖಾ ದಳ 14 ಕಡೆಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದು, ಓರ್ವನನ್ನು ಬಂಧಿಸಿದೆ.
ಕಳೆದ ವರ್ಷ ಭದ್ರತಾ ಪಡೆಗಳ ಮೇಲೆ ಜಾರ್ಖಂಡ್ ನಲ್ಲಿ ದಾಳಿ ನಡೆಸಲು ಸಿಪಿಐ-ಮಾವೋವಾದಿ ಸಿಬ್ಬಂದಿಗಳು ಸಂಚು ರೂಪಿಸಿದ್ದರು.
ಲೋಹರ್ದಗಾದಲ್ಲಿ 9 ಸ್ಥಳಗಳು ಹಾಗೂ ಲತೇಹರ್ ನಲ್ಲಿ 5 ಜಿಲ್ಲೆಗಳಲ್ಲಿ ಎನ್ಐಎ ದಾಳಿ ನಡೆಸಿದ್ದು, ಶಂಕಿತರಿಗೆ ಸಂಬಂಧಿಸಿದ ಪ್ರದೇಶಗಳಲ್ಲಿ ಶೋಧಕಾರ್ಯಾಚರಣೆ ನಡೆಸಲಾಗಿದೆ ಎಂದು ಎನ್ಐಎ ವಕ್ತಾರರು ಹೇಳಿದ್ದಾರೆ. ದಾಳಿಯ ವೇಳೆ ನಾಡ ಬಂದೂಕು 6 ಜಿವಂತ ಗುಂಡುಗಳು, ಒಂದು ಮ್ಯಾಗ್ಜೈನ್, ಎಲೆಕ್ಟ್ರಾನಿಕ್ ಗ್ಯಾಡ್ಜೆಟ್ ಗಳು ಹಾಗೂ ಹಣಕಾಸಿಗೆ ಸಂಬಂಧಪಟ್ಟ ವಹಿವಾಟುಗಳ ವಿವರಗಳನ್ನು ದಾಳಿಯ ವೇಳೆ ವಶಕ್ಕೆ ಪಡೆಯಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ.
ದಾಳಿಯ ವೇಳೆ ಸಜನ್ ಕುಮಾರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.
Advertisement