ಜಾರ್ಖಂಡ್ ಎಂಜಿಎನ್‌ಆರ್‌ಇಜಿಎ ಹಗರಣ: ಅಮಾತುಗೊಂಡ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಕೋರ್ಟ್ ಗೆ ಶರಣು

ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರ ಜಾಮೀನು ಅವಧಿ ಮುಗಿದ ನಂತರ ಬುಧವಾರ ರಾಂಚಿಯ ವಿಶೇಷ ಪಿಎಂಎಲ್‌ಎ(ಮನಿ ಲಾಂಡರಿಂಗ್ ಕಾಯ್ದೆ) ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.
ಪೂಜಾ ಸಿಂಘಾಲ್
ಪೂಜಾ ಸಿಂಘಾಲ್
Updated on

ರಾಂಚಿ: ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರ ಜಾಮೀನು ಅವಧಿ ಮುಗಿದ ನಂತರ ಬುಧವಾರ ರಾಂಚಿಯ ವಿಶೇಷ ಪಿಎಂಎಲ್‌ಎ(ಮನಿ ಲಾಂಡರಿಂಗ್ ಕಾಯ್ದೆ) ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ಕೋರ್ಟ್ ಗೆ ಶರಣಾದ ಪೂಜಾ ಸಿಂಘಾಲ್ ಅವರನ್ನು ಬಿರ್ಸಾ ಮುಂಡಾ ಸೆಂಟ್ರಲ್ ಜೈಲಿಗೆ ಕಳುಹಿಸಲಾಗಿದೆ.

ಫೆಬ್ರವರಿ 2023 ರಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಮಗಳ ಚಿಕಿತ್ಸೆಗಾಗಿ ಸಿಂಘಾಲ್ ಅವರಿಗೆ ಎರಡು ತಿಂಗಳ ಮಧ್ಯಂತರ ಜಾಮೀನು ನೀಡಲಾಗಿತ್ತು. ಇದಕ್ಕೂ ಮೊದಲು ಜನವರಿ 3 ರಂದು, ಇದೇ ಆಧಾರದ ಮೇಲೆ ಸಿಂಘಾಲ್‌ಗೆ ಒಂದು ತಿಂಗಳ ಮಧ್ಯಂತರ ಜಾಮೀನು ನೀಡಲಾಗಿತ್ತು.

ನವೆಂಬರ್ 3, 2022 ರಂದು ಜಾರ್ಖಂಡ್ ಹೈಕೋರ್ಟ್ ಜಾಮೀನು ಸಿಂಘಾಲ್ ಅವರಿಗೆ ಜಾಮೀನು ನಿರಾಕರಿಸಿದ್ದು, ಐಎಎಸ್ ಅಧಿಕಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಎಂಜಿಎನ್‌ಆರ್‌ಇಜಿಎ) ಹಣ ದುರುಪಯೋಗ ಮತ್ತು ಇತರ ಆರೋಪಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ 15 ಗಂಟೆಗಳ ಕಾಲ ವಿಚಾರಣೆಯ ನಂತರ ಕಳೆದ ವರ್ಷ ಮೇ 11 ರಂದು ಸಿಂಘಾಲ್ ಅವರ್ನು ಬಂಧಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com