ಬಟಿಂಡಾ ಸೇನಾ ನೆಲೆಯಲ್ಲಿ ಗುಂಡಿನ ದಾಳಿ: ನಾಲ್ವರು ಯೋಧರ ಹತ್ಯೆ ಸಂಬಂಧ ಯೋಧನೋರ್ವನ ಬಂಧನ

ಪಂಜಾಬ್‌ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯೋಧನನ್ನು ಬಂಧಿಸಲಾಗಿದೆ.
ಬಟಿಂಡಾ ಸೇನಾ ನೆಲೆ
ಬಟಿಂಡಾ ಸೇನಾ ನೆಲೆ
Updated on

ಬಟಿಂಡಾ: ಪಂಜಾಬ್‌ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯೋಧನನ್ನು ಬಂಧಿಸಲಾಗಿದೆ. 

ಬಟಿಂಡಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗುಲ್ನೀತ್ ಸಿಂಗ್ ಖುರಾನಾ ಅವರು ಬಂಧಿತ ಯೋಧನನ್ನು ದೇಸಾಯಿ ಮೋಹನ್ ಎಂದು ಗುರುತಿಸಿದ್ದಾರೆ. ಘಟನೆಯ ಹಿಂದಿನ ಉದ್ದೇಶವು ವೈಯಕ್ತಿಕವಾಗಿದೆ. ಆತ ಆ ಯೋಧರೊಂದಿಗೆ ಹಗೆತನ ಹೊಂದಿದ್ದರು. ಗಮನಾರ್ಹವೆಂದರೆ, ಏಪ್ರಿಲ್ 12 ರಂದು, ಬಟಿಂಡಾದ ಸೇನಾ ಠಾಣೆಯೊಳಗೆ ಮಲಗಿದ್ದ ನಾಲ್ವರು ಯೋಧರನ್ನು ಗುಂಡಿಕ್ಕಿ ಕೊಲ್ಲಲಾಯಿತು.

ಪಂಜಾಬ್ ಪೊಲೀಸರ ಪ್ರಕಾರ, ಬಂಧಿತನನ್ನು ಸೇನೆಯ ಗನ್ನರ್ ಎಂದು ಹೇಳಲಾಗುತ್ತಿದೆ. ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಪಂಜಾಬ್ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ. ಪರಸ್ಪರ ವಾಗ್ವಾದದಲ್ಲಿ ಸೇನಾ ನೆಲೆಯಲ್ಲಿ ಗುಂಡಿನ ದಾಳಿ ನಡೆದಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಬಟಿಂಡಾ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ. ಬಿಳಿ ಕುರ್ತಾ ಪೈಜಾಮಾ ಧರಿಸಿ, ಮುಖ ಮತ್ತು ತಲೆಗೆ ಬಟ್ಟೆಯಿಂದ ಮುಚ್ಚಿಕೊಂಡಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿಯ ನಂತರ ಬ್ಯಾರಕ್‌ನಿಂದ ಹೊರಬರುವುದನ್ನು ನೋಡಿದ್ದೇನೆ ಎಂದು ದೇಸಾಯಿ ಮೋಹನ್ ಈ ಹಿಂದೆ ಹೇಳಿಕೆ ನೀಡಿದ್ದರು.

ಅವರಲ್ಲಿ ಒಬ್ಬರ ಬಳಿ ಐಎನ್‌ಎಸ್‌ಎಎಸ್ ರೈಫಲ್ ಮತ್ತು ಇನ್ನೊಬ್ಬರ ಬಳಿ ಕೊಡಲಿ ಇತ್ತು ಎಂದು ಅವರು ಪೊಲೀಸ್ ಎಫ್‌ಐಆರ್‌ನಲ್ಲಿ ಹೇಳಿದ್ದರು. ಬಟಿಂಡಾ ಮಿಲಿಟರಿ ನಿಲ್ದಾಣವು ದೇಶದ ಅತಿದೊಡ್ಡ ಸೇನಾ ನೆಲೆಗಳಲ್ಲಿ ಒಂದಾಗಿದೆ ಮತ್ತು ಸೇನೆಯ ಹಲವಾರು ಕಾರ್ಯಾಚರಣೆ ಘಟಕಗಳನ್ನು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com