ಕರ್ನಾಟಕ ವಿಧಾನಸಭೆ ಚುನಾವಣೆ: ರಾಜ್ಯದಲ್ಲಿ ಐವರು ವೀಕ್ಷಕರನ್ನು ನೇಮಿಸಿದ ಕಾಂಗ್ರೆಸ್

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಬುಧವಾರ ಐವರು ವೀಕ್ಷಕರನ್ನು ನೇಮಿಸಿದ್ದು, ಪ್ರತಿಯೊಬ್ಬರೂ ರಾಜ್ಯದ ಒಂದೊಂದು ಪ್ರದೇಶವನ್ನು ನೋಡಿಕೊಳ್ಳಲಿದ್ದಾರೆ.
ಕಾಂಗ್ರೆಸ್
ಕಾಂಗ್ರೆಸ್

ನವದೆಹಲಿ: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಬುಧವಾರ ಐವರು ಪ್ರಾದೇಶಿಕ ವೀಕ್ಷಕರನ್ನು ನೇಮಿಸಿದ್ದು, ಪ್ರತಿಯೊಬ್ಬರೂ ರಾಜ್ಯದ ಒಂದೊಂದು ಪ್ರದೇಶವನ್ನು ನೋಡಿಕೊಳ್ಳಲಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಮಧ್ಯ ಕರ್ನಾಟಕ ಪ್ರದೇಶಕ್ಕೆ ವೀಕ್ಷಕರಾಗಿ, ಎ ಚೆಲ್ಲಕುಮಾರ್ ಮೈಸೂರು ಪ್ರದೇಶಕ್ಕೆ ಮತ್ತು ಮಾಣಿಕಂ ಟ್ಯಾಗೋರ್ ಮುಂಬೈ-ಕರ್ನಾಟಕ ಪ್ರದೇಶಕ್ಕೆ ವೀಕ್ಷಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಪಕ್ಷದ ನಾಯಕ ಅಜೋಯ್ ಕುಮಾರ್ ಅವರನ್ನು ಕರಾವಳಿ ಕರ್ನಾಟಕ ಪ್ರದೇಶಕ್ಕೆ ಪ್ರಾದೇಶಿಕ ವೀಕ್ಷಕರನ್ನಾಗಿ ನೇಮಿಸಲಾಗಿದ್ದು, ಮೋಹನ್ ಪ್ರಕಾಶ್ ಅವರು ರಾಜ್ಯದ ಉತ್ತರ ಭಾಗದಲ್ಲಿರುವ ಹೈದರಾಬಾದ್-ಕರ್ನಾಟಕ ಪ್ರದೇಶವನ್ನು ನೋಡಿಕೊಳ್ಳಲಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ಏಕೈಕ ದಕ್ಷಿಣ ರಾಜ್ಯವಾದ ಕರ್ನಾಟಕದಲ್ಲಿ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com