ಚಂಡೀಗಢದಲ್ಲಿ ಬಾದಲ್‌ ಅಂತಿಮ ದರ್ಶನ ಪಡೆಯಲಿದ್ದಾರೆ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಧ್ಯಾಹ್ನ 12 ಗಂಟೆಗೆ ಚಂಡೀಗಢಕ್ಕೆ ತೆರಳಿ ನಿನ್ನೆ ನಿಧನರಾದ ಶಿರೋಮಣಿ ಅಕಾಲಿದಳದ ವರಿಷ್ಠ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.
ಪ್ರಕಾಶ್ ಸಿಂಗ್ ಬಾದಲ್
ಪ್ರಕಾಶ್ ಸಿಂಗ್ ಬಾದಲ್
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಧ್ಯಾಹ್ನ 12 ಗಂಟೆಗೆ ಚಂಡೀಗಢಕ್ಕೆ ತೆರಳಿ ನಿನ್ನೆ ನಿಧನರಾದ ಶಿರೋಮಣಿ ಅಕಾಲಿದಳದ ವರಿಷ್ಠ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.

ಪಂಜಾಬ್ ಮಾಜಿ ಮುಖ್ಯಮಂತ್ರಿ ಮತ್ತು ಶಿರೋಮಣಿ ಅಕಾಲಿದಳದ ವರಿಷ್ಠ ಪ್ರಕಾಶ್ ಸಿಂಗ್ ಬಾದಲ್ ಅವರ ನಿಧನದ ನಂತರ ಅವರ ಅನುಯಾಯಿಗಳು ಮತ್ತು ಬೆಂಬಲಿಗರು ತಮ್ಮ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಚಂಡೀಗಢದ ಪಕ್ಷದ ಕಚೇರಿಯಲ್ಲಿ ಇಂದು ಬೆಳಗ್ಗೆಯಿಂದಲೇ ಜಮಾಯಿಸಲಿದ್ದಾರೆ.

ಪಕ್ಷದ ನಾಯಕರ ಪ್ರಕಾರ, ಅಂತಿಮ ದರ್ಶನಕ್ಕಾಗಿ ಬಾದಲ್ ಅವರ ಪಾರ್ಥಿವ ಶರೀರವನ್ನು ಬುಧವಾರ ಬೆಳಗ್ಗೆ 10:00 ರಿಂದ ಮಧ್ಯಾಹ್ನದವರೆಗೆ ಚಂಡೀಗಢದ ಎಸ್‌ಎಡಿ ಕಚೇರಿಯಲ್ಲಿ ಇರಿಸಲಾಗುವುದು ಎಂದು ತಿಳಿಸಿದ್ದಾರೆ.

95 ವರ್ಷದ ಹಿರಿಯ ಬಾದಲ್ ಅವರ ಅಂತ್ಯ ಸಂಸ್ಕಾರ ನಾಳೆ ಮಧ್ಯಾಹ್ನ 1 ಗಂಟೆಗೆ ಅವರ ಪೂರ್ವಜರ ಗ್ರಾಮವಾದ ಬಾದಲ್‌ನಲ್ಲಿ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com