ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದ ಕುಲ್ಗಾಮ್ ನಲ್ಲಿ ಕಳೆದ ತಡರಾತ್ರಿ ನಡೆದ ಎನ್ಕೌಂಟರ್ನಲ್ಲಿ ತೀವ್ರ ಗಾಯಗೊಂಡಿದ್ದ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ನಿನ್ನೆ ಶುಕ್ರವಾರ ತಡರಾತ್ರಿ 34 ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಕುಲ್ಗಾಮ್ ಜಿಲ್ಲೆಯ ಹಲಾನ್ ಅರಣ್ಯ ಪ್ರದೇಶದಲ್ಲಿ ಉಗ್ರರ ಚಲನವಲನ ಮತ್ತು ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ಹೊಂದಿರುವ ಶಂಕೆಯ ಮೇಲೆ ಹುಡುಕಾಟ ಆರಂಭಿಸಿದರು.
ಈ ವೇಳೆ ಉಗ್ರರು ಏಕಾಏಕಿ ಗುಂಡಿನ ಮಳೆಗೈಯಲಾರಂಭಿಸಿದರು. ಪೊಲೀಸ್ ಮತ್ತು ರಾಷ್ಟ್ರೀಯ ರೈಫಲ್ಸ್ ನ ಜಂಟಿ ಶೋಧ ಕಾರ್ಯಾಚರಣೆ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದರು.
ಇದಕ್ಕೂ ಮುನ್ನ ಮೂವರು ಯೋಧರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಇಲ್ಲಿನ 92 ಮೂಲ ಆಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿ ಅವರು ಹುತಾತ್ಮರಾಗಿದ್ದಾರೆ.
Advertisement