ಉತ್ತರ ಪ್ರದೇಶ: ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿ, ಗುದದ್ವಾರಕ್ಕೆ ಮೆಣಸಿಕಾಯಿ ತುರುಕಿ ವಿಕೃತಿ

ಇಬ್ಬರು ಅಪ್ರಾಪ್ತ ಬಾಲಕರಿಗೆ ಮೂತ್ರ ಕುಡಿಸಿ ಗುದದ್ವಾರದಲ್ಲಿ ಹಸಿ ಮೆಣಸಿನಕಾಯಿ ತುರುಕಿ, ಪತ್ತೆ ಮಾಡಲು ಸಾಧ್ಯವಾಗದಂತಹ ಚುಚ್ಚು ಮದ್ದನ್ನು ನೀಡಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ವರದಿಯಾಗಿದೆ. 
ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿ, ಗುದದ್ವಾರ ಮೆಣಸಿಕಾಯಿ ತುರುಕಿ ವಿಕೃತಿ
ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿ, ಗುದದ್ವಾರ ಮೆಣಸಿಕಾಯಿ ತುರುಕಿ ವಿಕೃತಿ

ಲಖನೌ: ಇಬ್ಬರು ಅಪ್ರಾಪ್ತ ಬಾಲಕರಿಗೆ ಮೂತ್ರ ಕುಡಿಸಿ ಗುದದ್ವಾರದಲ್ಲಿ ಹಸಿ ಮೆಣಸಿನಕಾಯಿ ತುರುಕಿ, ಪತ್ತೆ ಮಾಡಲು ಸಾಧ್ಯವಾಗದಂತಹ ಚುಚ್ಚು ಮದ್ದನ್ನು ನೀಡಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ವರದಿಯಾಗಿದೆ. 

10-15 ವರ್ಷದ ಇಬ್ಬರು ಬಾಲಕರ ವಿರುದ್ಧ ಕಳ್ಳತನದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ರೀತಿ ಅವರನ್ನು ಹಿಂಸಿಸಲಾಗಿದೆ. 

ಮೂತ್ರ ಕುಡಿಯುವಂತೆ, ಹಸಿರು ಮೆಣಸಿನಕಾಯಿ ತಿನ್ನುವಂತೆ ಒತ್ತಾಯಿಸುತ್ತಿರುವ ವೀಡಿಯೋ ವೈರಲ್ ಆಗತೊಡಗಿದ್ದು, ಬಾಲಕರಿಗೆ ಬೆದರಿಕೆ ಹಾಕುತ್ತಿರುವುದು ವೀಡಿಯೋದಲ್ಲಿ ದಾಖಲಾಗಿದೆ. 

ಹಣ ಕಳ್ಳತನ ಮಾಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಾಲಕರನ್ನು ಕಟ್ಟಿ ಹಾಕಿ ಈ ರೀತಿ ಹಿಂಸಿಸಲಾಗಿದೆ. ಆ.04 ರಂದು  ಈ ವೀಡಿಯೋವನ್ನು ಚಿತ್ರೀಕರಿಸಲಾಗಿದ್ದು, ಜಿಲ್ಲೆಯ ಪತ್ರಾ ಬಜಾರ್ ಪೊಲೀಸ್ ಠಾಣೆಯ ಕೊಂಕಟಿ ಚೌರಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com