ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ: ಸಂಸದ ಸ್ಥಾನ ವಾಪಸ್, ನಾಳೆ ಸ್ಪೀಕರ್ ನಿರ್ಧಾರ ಸಾಧ್ಯತೆ

ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಿಸಿರುವ 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿರುವ ಹಿನ್ನಲೆಯಲ್ಲಿ ಅವರ ಮೇಲಿನ ಸಂಸದ ಸ್ಥಾನ ಅನರ್ಹತೆಯನ್ನು ತೆರವು ಮಾಡುವ ಸಾಧ್ಯತೆ ಇದೆ ಎಂದು  ಹೇಳಲಾಗುತ್ತಿದ್ದು, ನಾಳೆ ಸ್ಪೀಕರ್ ಕೈಗೊಳ್ಳುವ ನಿರ್ಣಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಿಸಿರುವ 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿರುವ ಹಿನ್ನಲೆಯಲ್ಲಿ ಅವರ ಮೇಲಿನ ಸಂಸದ ಸ್ಥಾನ ಅನರ್ಹತೆಯನ್ನು ತೆರವು ಮಾಡುವ ಸಾಧ್ಯತೆ ಇದೆ ಎಂದು  ಹೇಳಲಾಗುತ್ತಿದ್ದು, ನಾಳೆ ಸ್ಪೀಕರ್ ಕೈಗೊಳ್ಳುವ ನಿರ್ಣಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಿಸಿರುವ ಎರಡು ವರ್ಷ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ. ಇದರಿಂದ ಅವರು ಸಂಸದ ಸ್ಥಾನವನ್ನು ಮರಳಿ ಪಡೆದಿದ್ದಾರೆ. ಆದರೆ ರಾಹುಲ್ ಗಾಂಧಿಗೆ ಸಂಸದ ಸ್ಥಾನ ಮರಳಿಸುವ ಕುರಿತು ಸ್ಪೀಕರ್ ಓಂ ಬಿರ್ಲಾ ಅವರು ನಾಳೆ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಮಾತ್ರವಲ್ಲದೇ ರಾಹುಲ್ ಗಾಂಧಿ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಇದ್ದ ತಡೆಯ ಆತಂಕ ಕೂಡ ನಿವಾರಣೆಯಾಗಿದೆ.

'ಮೋದಿ ಸರ್‌ನೇಮ್' ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯವು ವಿಧಿಸಿರುವ ಶಿಕ್ಷೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿತ್ತು. ಇದರಿಂದ ರಾಹುಲ್ ಗಾಂಧಿ ಅವರು ಸಂಸದ ಸ್ಥಾನವನ್ನು ಮರಳಿ ಪಡೆಯಲಿದ್ದಾರೆ. ಮಾನಹಾನಿ ಪ್ರಕರಣದಲ್ಲಿ ಕೆಳ ನ್ಯಾಯಾಲಯ ನೀಡಿದ್ದ ಎರಡು ವರ್ಷಗಳ ಶಿಕ್ಷೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈಗ ಆ ಶಿಕ್ಷೆಗೆ ತಡೆ ಬಂದಿರುವುದರಿಂದ ರಾಹುಲ್ ಗಾಂಧಿ ಅವರು ಕಳೆದುಕೊಂಡಿದ್ದ ಸಂಸತ್ ಸದಸ್ಯತ್ವ ವಾಪಸ್ ಸಿಕ್ಕಂತಾಗಿದೆ. 

ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಗರಿಷ್ಠ ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯು ಒಂದೇ ಒಂದು ದಿನ ಕಡಿಮೆಯಾಗಿದ್ದರೂ, ಅವರು ಲೋಕಸಭಾ ಸದಸ್ಯತ್ವದ ಅನರ್ಹತೆಗೆ ಒಳಗಾಗುತ್ತಿರಲಿಲ್ಲ ಎಂಬುದನ್ನು ಸುಪ್ರೀಂಕೋರ್ಟ್ ಗಮನಿಸಿತ್ತು.

ಕಾಗದ ಪತ್ರಗಳ ಸಿದ್ಧತೆ
ಕಾಂಗ್ರೆಸ್ಸಿನ ರಾಹುಲ್ ಗಾಂಧಿಯವರ ಸಂಸದ ಸ್ಥಾನದ ಮರುಸ್ಥಾಪನೆಯ ಕಾಗದ ಪತ್ರಗಳು ಸಿದ್ಧವಾಗಿವೆ ಮತ್ತು ಉಳಿದಿರುವುದು ಲೋಕಸಭಾ ಸ್ಪೀಕರ್ ಅವರ ಸಹಿ ಮಾತ್ರ. ಇದು ನಾಳೆ ನಡೆಯಲಿದೆ. ಒಂದು ವೇಳೆ ಸ್ಪೀಕರ್ ಸಹಿ ವಿಳಂಬವಾದಲ್ಲಿ ಕಾಂಗ್ರೆಸ್ ನ್ಯಾಯಾಲಯದ ಮೊರೆ ಹೋಗಲಿದೆ ಎಂದು ಮೂಲಗಳು ತಿಳಿಸಿವೆ. ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾದ ನಂತರ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ವೇಗದಲ್ಲೇ ಸ್ಪೀಕರ್ ಕಾರ್ಯನಿರ್ವಹಿಸದಿದ್ದರೆ ಸಂಯುಕ್ತ ವಿರೋಧ ಪಕ್ಷಗಳು (ವಿಪಕ್ಷಗಳ ಮೈತ್ರಿಕೂಟ)ವು ಸಂಸತ್ತಿನಲ್ಲಿ ಚರ್ಚೆ ಮಾಡುವ ಪಟ್ಟಿಗೆ ಈ ವಿಷಯವನ್ನು ಸೇರಿಸಲಿವೆ ಮತ್ತು ಈ ಸಂಬಂಧ ಕಲಾಪದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲಿವೆ ಎಂದು ಹೇಳಲಾಗಿದೆ.

ಈ ಹಿಂದೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಸದಸ್ಯ, ಲಕ್ಷದ್ವೀಪ್ ಸಂಸದ ಪಿಪಿ ಮೊಹಮ್ಮದ್ ಫೈಜಲ್ ಅವರ ಪ್ರಕರಣದಲ್ಲಿ, ಅವರ ಸಂಸದ ಸ್ಥಾನ ಪುನಃಸ್ಥಾಪನೆಗೆ ಅಂದಿನ ಸ್ಪೀಕರ್ ಒಂದು ತಿಂಗಳ ಕಾಲ ಸಮಯ ತೆಗೆದುಕೊಂಡಿದ್ದರು.

10 ವರ್ಷಗಳ ಜೈಲು ಶಿಕ್ಷೆಯನ್ನು ಪಡೆದ ನಂತರ ಜನವರಿಯಲ್ಲಿ ಪಿಪಿ ಮೊಹಮ್ಮದ್ ಫೈಜಲ್  ಅನರ್ಹಗೊಂಡಿದ್ದರು. ಆದರೆ ಶಿಕ್ಷೆಯನ್ನು ಸ್ಥಗಿತಗೊಳಿಸಿದ ಕೇರಳ ಹೈ ಕೋರ್ಟ್ ಆದೇಶ ಹೊರತಾಗಿಯೂ ಅವರು ತಮ್ಮ ಸಂಸದ ಸ್ಥಾನ ಪುನಃಸ್ಥಾಪನೆಯಾಗದಿದ್ದಾಗ ಸುಪ್ರೀಂ ಕೋರ್ಟ್‌ಗೆ ಹೋಗಬೇಕಾಯಿತು. ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆಗೆ ಮುಂಚಿತವಾಗಿ ಅವರನ್ನು ಮತ್ತೆ ಸಂಸದರನ್ನಾಗಿ ಪುನಃಸ್ಥಾಪಿಸಲಾಯಿತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com