ನವದೆಹಲಿ: ಜಂತರ್ ಮಂತರ್ ನಲ್ಲಿ ಭಾರತೀಯ ಯುವ ಕಾಂಗ್ರೆಸ್ ಪ್ರತಿಭಟನೆ!

ಮಣಿಪುರದಲ್ಲಿನ ಹಿಂಸಾಚಾರ ಸೇರಿದಂತೆ ದೇಶದಲ್ಲಿನ ಹಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ಸದಸ್ಯರು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.
ಯುವ ಕಾಂಗ್ರೆಸ್ ಪ್ರತಿಭಟನೆ
ಯುವ ಕಾಂಗ್ರೆಸ್ ಪ್ರತಿಭಟನೆ
Updated on

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರ ಸೇರಿದಂತೆ ದೇಶದಲ್ಲಿನ ಹಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ಸದಸ್ಯರು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.

'ಭಾರತ ಉಳಿಸಿ, ಸಂಸತ್ ಘೇರಾವ್' ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ನ ನೂರಾರು ಕಾರ್ಯಕರ್ತರು ಪಾಲ್ಗೊಂಡರು. ಮಣಿಪುರ ಜನಾಂಗೀಯ  ಹಿಂಸಾಚಾರದಿಂದ ತತ್ತರಿಸಿದ್ದರೂ ಪ್ರಧಾನಿ ನರೇಂದ್ರ ಮೋದಿ ಇಲ್ಲಿಯವರೆಗೂ ಮೌನ ಮುರಿದಿಲ್ಲ. ದೇಶದಲ್ಲಿ ಹಣದುಬ್ಬರ ಹೆಚ್ಚಾಗಿದ್ದು, ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ನಿರುದ್ಯೋಗ ಪ್ರಮಾಣ ನಿರಂತರವಾಗಿ ಏರಿಕೆಯಾಗುತ್ತಿದ್ದರೂ ಉದ್ಯೋಗ ಸೃಷ್ಟಿಯತ್ತ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನಾಕರರನ್ನು ನಿಯಂತ್ರಿಸಲು ಪೊಲೀಸರು ಬ್ಯಾರಿಕೇಡ್ ಹಾಕಿದ್ದರು. ಕೆಲವರು ಆ ಬ್ಯಾರಿಕೇಡ್ ಗಳನ್ನು ಮುರಿಯಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣದ ನಂತರ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com