ಭ್ರಷ್ಟಾಚಾರ ವಿರುದ್ಧ ಶೂನ್ಯ ಸಹಿಷ್ಣುತೆಯ ಕಟ್ಟುನಿಟ್ಟಿನ ನೀತಿಯನ್ನು ಭಾರತ ಹೊಂದಿದೆ: ಜಿ-20 ಸಭೆಯಲ್ಲಿ ಪ್ರಧಾನಿ ಮೋದಿ

ದೇಶದಲ್ಲಿ ಭ್ರಷ್ಟಾಚಾರದ ಪ್ರಭಾವ ಬಡವರು ಮತ್ತು ನಿರ್ಗತಿಕರ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: ದೇಶದಲ್ಲಿ ಭ್ರಷ್ಟಾಚಾರದ ಪ್ರಭಾವ ಬಡವರು ಮತ್ತು ನಿರ್ಗತಿಕರ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ಭ್ರಷ್ಟಾಚಾರವು ಸಂಪನ್ಮೂಲಗಳು, ಮಾರುಕಟ್ಟೆಗಳ ಹಂಚಿಕೆಯ ಮೇಲೆ ಪರಿಣಾಮ ಬೀರುತ್ತದೆ. ಜನರ ಜೀವನದ ಗುಣಮಟ್ಟವನ್ನು ಕುಗ್ಗಿಸುತ್ತದೆ ಎಂದು ಅವರು ಹೇಳಿದರು.

ಕೋಲ್ಕತ್ತಾದಲ್ಲಿ ನಡೆದ ಜಿ-20 ಭ್ರಷ್ಟಾಚಾರ-ವಿರೋಧಿ ಸಚಿವರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಿಎಂ, ಭಾರತವು ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆಯ ಕಟ್ಟುನಿಟ್ಟಾದ ನೀತಿಯನ್ನು ಹೊಂದಿದೆ ಎಂದರು. 

ನೊಬೆಲ್ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ ಠಾಗೋರ್ ಅವರು ದುರಾಶೆಯ ವಿರುದ್ಧ ನಮಗೆ ಎಚ್ಚರಿಕೆ ನೀಡಿದ್ದಾರೆ ಏಕೆಂದರೆ ಅದು ಸತ್ಯವನ್ನು ಅರಿತುಕೊಳ್ಳುವುದನ್ನು ತಡೆಯುತ್ತದೆ ಎಂದು ತೋರಿಸಿಕೊಟ್ಟಿದ್ದಾರೆ ಎಂದರು. 

ನಾವು ಆರ್ಥಿಕ ಅಪರಾಧಿಗಳನ್ನು ಆಕ್ರಮಣಕಾರಿಯಾಗಿ ಎದುರಿಸುತ್ತಿದ್ದೇವೆ, ಅದಕ್ಕಾಗಿ ಆರ್ಥಿಕ ಅಪರಾಧಿಗಳ ಕಾಯ್ದೆಯನ್ನು ಜಾರಿಗೊಳಿಸಿದ್ದೇವೆ. ಆರ್ಥಿಕ ಅಪರಾಧಿಗಳು ಮತ್ತು ಪರಾರಿಯಾಗಿರುವವರಿಂದ 1.8 ಶತಕೋಟಿ ಡಾಲರ್‌ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದೇವೆ ಎಂದರು. 

ನಮ್ಮ ಸಾಮೂಹಿಕ ಪ್ರಯತ್ನಗಳು ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಗಣನೀಯವಾಗಿ ಬೆಂಬಲಿಸುತ್ತದೆ ಎಂದು ಜಿ20 ಸಭೆಯಲ್ಲಿ ಹೇಳಿದರು.

2018 ರಲ್ಲಿ G-20 ಶೃಂಗಸಭೆಯಲ್ಲಿ, ಆಸ್ತಿ ಮರುಪಡೆಯುವಿಕೆಗಾಗಿ ಪರಾರಿಯಾದ ಆರ್ಥಿಕ ಅಪರಾಧಿಗಳ ವಿರುದ್ಧ ಕ್ರಮಕ್ಕಾಗಿ ನಾನು 9-ಅಂಶಗಳ ಕಾರ್ಯಸೂಚಿಯನ್ನು ಮಂಡಿಸಿದ್ದೆನು. ನಿಮ್ಮ ಗುಂಪು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಲು ಸಂತೋಷವಾಗುತ್ತಿದೆ ಎಂದರು. 

ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಲೆಕ್ಕಪರಿಶೋಧನಾ ಸಂಸ್ಥೆಗಳಿಗೆ ಗೌರವ ನೀಡಬೇಕು ಎಂದರು. ಕಲ್ಯಾಣ ಯೋಜನೆಯ ಸೋರಿಕೆಯನ್ನು ತಡೆಗಟ್ಟಲಾಗುತ್ತಿದ್ದು, ಭಾರತದಲ್ಲಿ ನೇರ ವರ್ಗಾವಣೆಯ ಮೂಲಕ ಜನರಿಗೆ 360 ಶತಕೋಟಿ ಡಾಲರ್ ನೀಡಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com