ಮಣಿಪುರ ಹೊತ್ತಿ ಉರಿಯುತ್ತಿದ್ದರೆ, ಪ್ರಧಾನಿ ಮೋದಿ ಸಂಸತ್ತಿನಲ್ಲಿ ನಗುತ್ತಿದ್ದರು: ವಯನಾಡಿನಲ್ಲಿ ರಾಹುಲ್ ಗಾಂಧಿ

ಸಂಸತ್ತಿನಲ್ಲಿ ಈಶಾನ್ಯ ರಾಜ್ಯದಲ್ಲಿನ ಹಿಂಸಾಚಾರದ ಬಗ್ಗೆ ನಡೆದ ಚರ್ಚೆ ವೇಳೆಯೂ ಮಣಿಪುರದ ಸಮಸ್ಯೆಯನ್ನು ಬಗೆಹರಿಸಲಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಸಂಸತ್ತಿನಲ್ಲಿ ಈಶಾನ್ಯ ರಾಜ್ಯದಲ್ಲಿನ ಹಿಂಸಾಚಾರದ ಬಗ್ಗೆ ನಡೆದ ಚರ್ಚೆ ವೇಳೆಯೂ ಮಣಿಪುರದ ಸಮಸ್ಯೆಯನ್ನು ಬಗೆಹರಿಸಲಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಲೋಕಸಭೆ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ವಯನಾಡ್‌ಗೆ ಮೊದಲ ಬಾರಿಗೆ ಭೇಟಿ ನೀಡಿದ ಅವರನ್ನು ಸ್ವಾಗತಿಸಲು ಇಲ್ಲಿನ ಕಲ್ಪೆಟ್ಟಾದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಆಯೋಜಿಸಿದ್ದ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

'ಅವರು (ಮೋದಿ) 2 ಗಂಟೆ 13 ನಿಮಿಷಗಳ ಕಾಲ ಮಾತನಾಡಿದರು. ಅವರು ನಕ್ಕರು... ಅವರು ತಮಾಷೆ ಮಾಡಿದರು... ಅವರು ಮುಗುಳ್ನಕ್ಕರು... ಅವರ ಕ್ಯಾಬಿನೆಟ್ ನಕ್ಕಿತು, ತಮಾಷೆಗೆ ನಕ್ಕರು... ಅವರು ತುಂಬಾ ಮೋಜು ಮಾಡಿದರು. ಪ್ರಧಾನಿಯವರು ಕಾಂಗ್ರೆಸ್, ನಾನು ಮತ್ತು INDIA ಮೈತ್ರಿ ಸೇರಿದಂತೆ ಎಲ್ಲದರ ಬಗ್ಗೆ ಎರಡು ಗಂಟೆ ಮಾತನಾಡಿದ್ದಾರೆ. ಆದರೆ, ಮಣಿಪುರದ ಬಗ್ಗೆ ಎರಡು ನಿಮಿಷ ಮಾತನಾಡಿದ್ದಾರೆ' ಎಂದು ಗಾಂಧಿ ಹೇಳಿದರು.

ಬಿಜೆಪಿ ಮತ್ತು ಅದರ ನೇತೃತ್ವದ ಸರ್ಕಾರವು ಮಣಿಪುರದಲ್ಲಿ 'ಭಾರತದ ಮೂಲಭೂತ ತತ್ವಗಳು ಅಥವಾ ಮೌಲ್ಯಗಳನ್ನು ಕೊಂದಿದೆ' ಎಂದು ಹೇಳಿದರು.

'ಸಾವಿರಾರು ಕುಟುಂಬಗಳನ್ನು ನಾಶ ಮಾಡಿದ್ದೀರಿ. ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರಕ್ಕೆ ಅವಕಾಶ ನೀಡಿದ್ದೀರಿ. ಸಾವಿರಾರು ಜನರ ಹತ್ಯೆಗೆ ಅವಕಾಶ ನೀಡಿದ್ದೀರಿ ಮತ್ತು ದೇಶದ ಪ್ರಧಾನಿಯಾಗಿ ನೀವು ನಗುತ್ತಿದ್ದೀರಾ?' ಎಂದು ಪ್ರಶ್ನಿಸಿದರು.

ಭಾರತದ ಮೂಲಭೂತ ತತ್ವಗಳು ಅಥವಾ ಮೌಲ್ಯಗಳನ್ನು ಕೊಲೆ ಮಾಡುವ ಯಾರಾದರೂ ರಾಷ್ಟ್ರೀಯವಾದಿಯಾಗಲು ಸಾಧ್ಯವಿಲ್ಲ. 'ಭಾರತ ಮಾತೆಯ ಹತ್ಯೆಯ ಬಗ್ಗೆ ಎರಡು ನಿಮಿಷ ತೆಗೆದುಕೊಂಡಿದ್ದೀರಿ. ಹೀಗೆ ಮಾಡಲು ನಿಮಗೆ ಎಷ್ಟು ಧೈರ್ಯ? ನೀವು ಭಾರತದ ಕಲ್ಪನೆಯನ್ನು ಹೇಗೆ ತಳ್ಳಿಹಾಕುತ್ತೀರಿ?' 'ಕಳೆದ ನಾಲ್ಕು ತಿಂಗಳಿಂದ ಏನು ಮಾಡುತ್ತಿದ್ದೀರಿ? ನೀವೇಕೆ ಅಲ್ಲಿಗೆ ಹೋಗಿಲ್ಲ? ನೀವು ಹಿಂಸಾಚಾರವನ್ನು ತಡೆಯಲು ಏಕೆ ಪ್ರಯತ್ನಿಸಲಿಲ್ಲ? ಏಕೆಂದರೆ, ನೀವು ರಾಷ್ಟ್ರೀಯವಾದಿಗಳಲ್ಲ. ಭಾರತದ ಕಲ್ಪನೆಯನ್ನು ಕೊಲೆ ಮಾಡುವ ಯಾರಾದರೂ ರಾಷ್ಟ್ರೀಯವಾದಿಯಾಗಲು ಸಾಧ್ಯವಿಲ್ಲ' ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com