ಮೋದಿ ಕೊನೆಯ ಬಾರಿಗೆ ಕೆಂಪುಕೋಟೆಯಿಂದ ಧ್ವಜಾರೋಹಣ ಮಾಡಿದ್ದಾರೆ: ಲಾಲು ಪ್ರಸಾದ್ ಯಾದವ್

ಪ್ರಧಾನಿ ಮೋದಿ ಕೊನೆಯ ಬಾರಿಗೆ ಕೆಂಪುಕೋಟೆಯಿಂದ ಧ್ವಜಾರೋಹಣವನ್ನು ಇಂದು ನೆರವೇರಿಸಿದ್ದಾರೆ ಎಂದು ಆರ್ ಜೆಡಿ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ. 
ಲಾಲು ಪ್ರಸಾದ್ ಯಾದವ್
ಲಾಲು ಪ್ರಸಾದ್ ಯಾದವ್

ಪಾಟ್ನಾ:ಪ್ರಧಾನಿ ಮೋದಿ ಕೊನೆಯ ಬಾರಿಗೆ ಕೆಂಪುಕೋಟೆಯಿಂದ ಧ್ವಜಾರೋಹಣವನ್ನು ಇಂದು ನೆರವೇರಿಸಿದ್ದಾರೆ ಎಂದು ಆರ್ ಜೆಡಿ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ. 

ತಮ್ಮ ನಿವಾಸದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಲಾಲು ಪ್ರಸಾದ್, ಈ ಸಂದರ್ಭದಲ್ಲಿ ನಾನು ದೇಶದ ಜನತೆಗೆ ಶುಭಾಶಯ ಕೋರುತ್ತೇನೆ. ಮಹಾತ್ಮ ಗಾಂಧಿ, ಸುಭಾಷ್ ಚಂದ್ರ ಬೋಸ್, ಮೌಲಾನಾ ಅಬ್ದುಲ್ ಕಲಾಮ್ ಆಜಾದ್, ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರಂತಹ ಶ್ರೇಷ್ಠ ವ್ಯಕ್ತಿಗಳಿಗೆ ಗೌರವ ಸಲ್ಲಿಸುತ್ತೇನೆ ಎಂದು ಲಾಲು ಪ್ರಸಾದ್ ಯಾದವ್ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ಬರುವ ಮುಂದಿನ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುತ್ತಾರಾ? ಎಂಬ ಪತ್ರಕರ್ತರ ಲಘು ಧಾಟಿಯ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಲಾಲು ಪ್ರಸಾದ್ ಯಾದವ್,  ಇಲ್ಲ ಈ ಬಾರಿ ಅವರು ಧ್ವಜಾರೋಹಣ ನೆರವೇರಿಸಿದ್ದೇ ಅವರ ಅವಕಾಶದ ಕೊನೆಯಾಗಲಿದೆ, ಮುಂದಿನ ಬಾರಿ ನಾವು ಧ್ವಜಾರೋಹಣ ಮಾಡುತ್ತೇವೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com