ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚೆನ್ನೈ: ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವು

ಮಲಗುವ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ಮನಾಲಿ ಬಳಿಯ ಮಾಥುರ್‌ನಲ್ಲಿ ನಡೆದಿದೆ.
Published on

ಚೆನ್ನೈ:  ಮಲಗುವ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ಮನಾಲಿ ಬಳಿಯ ಮಾಥುರ್‌ನಲ್ಲಿ ನಡೆದಿದೆ.

ಮೃತರನ್ನು ಸಂತಾನಲಕ್ಷ್ಮಿ (65), ಅವರ ಮೊಮ್ಮಗಳಾದ ಸಂಧ್ಯಾ (10), ಪ್ರಿಯಾ ರಕ್ಷಿತಾ (8), ಪವಿತ್ರಾ (8) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ವರು ಮಲಗಿದ್ದ ಮಲಗುವ ಕೋಣೆಗೆ ಆಕಸ್ಮಿಕ ಬೆಂಕಿ ತಗುಲಿ ಕಾರ್ಬನ್ ಮಾನಾಕ್ಸೈಡ್ ವಿಷ ಸೇವಿಸಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪವರ್ ಸಾಕೆಟ್‌ಗೆ ಸೊಳ್ಳೆ ನಿವಾರಕ ಅಳವಡಿಸಲಾಗಿದ್ದು, ಕೊಠಡಿಯಲ್ಲಿನ ಎಲ್ಲಾ ತಂತಿಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಮೇರೆಗೆ ಮಾಧವರಂ ಮಿಲ್ಕ್ ಕಾಲೋನಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಫೋರೆನ್ಸಿಕ್ ತನಿಖೆಯ ನಂತರ ಬೆಂಕಿಗೆ ನಿಖರವಾದ ಕಾರಣ ಕಂಡುಹಿಡಿಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿನ ಕಾರಣವನ್ನು ಕಂಡುಹಿಡಿಯಲು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ಮೂಲದ ಪ್ರಕಾರ, ಎದುರು ಮನೆಯಲ್ಲಿ ವಾಸವಿದ್ದ ಮಕ್ಕಳ ತಾಯಿ ಬೆಳಿಗ್ಗೆ 5 ಗಂಟೆಗೆ ಮಕ್ಕಳನ್ನು ಎಬ್ಬಿಸಲು ಬಂದ ನಂತರ ವಿಷಯ ಬೆಳಕಿಗೆ ಬಂದಿದೆ. ಅವಳು ಬಾಗಿಲು ತಟ್ಟಿದಾಗ ಯಾರೂ ಉತ್ತರಿಸಲಿಲ್ಲ. ನಂತರ ಮಹಿಳೆ ನೆರೆಹೊರೆಯವರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com