ಉತ್ತರ ಪ್ರದೇಶ: ಕೊಲೆ ಆರೋಪಿ ರಾಜಾ ಭಯ್ಯಾ ಭೇಟಿಯಾದ ಸೂಪರ್ ಸ್ಟಾರ್ ರಜನಿಕಾಂತ್!

ಉತ್ತರ ಪ್ರದೇಶ ಪ್ರವಾಸದಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್ ಆಯೋಧ್ಯೆ ಭೇಟಿ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯಾನಾಥ್, ಅಖಿವಲೇಶ್ ಯಾದವ್ ರ ಭೇಟಿ ಬೆನ್ನಲ್ಲೇ ಕೊಲೆ ಆರೋಪಿ ರಾಜಾ ಭಯ್ಯಾ ಭೇಟಿಯಾಗಿರುವುದು ಎಲ್ಲರ ಹುಬ್ಬೇರಿಸಿದೆ.
ರಾಜಾ ಭಯ್ಯಾ ಭೇಟಿಯಾದ ಸೂಪರ್ ಸ್ಟಾರ್ ರಜನಿಕಾಂತ್
ರಾಜಾ ಭಯ್ಯಾ ಭೇಟಿಯಾದ ಸೂಪರ್ ಸ್ಟಾರ್ ರಜನಿಕಾಂತ್
Updated on

ಲಖನೌ: ಉತ್ತರ ಪ್ರದೇಶ ಪ್ರವಾಸದಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್ ಆಯೋಧ್ಯೆ ಭೇಟಿ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯಾನಾಥ್, ಅಖಿವಲೇಶ್ ಯಾದವ್ ರ ಭೇಟಿ ಬೆನ್ನಲ್ಲೇ ಕೊಲೆ ಆರೋಪಿ ರಾಜಾ ಭಯ್ಯಾ ಭೇಟಿಯಾಗಿರುವುದು ಎಲ್ಲರ ಹುಬ್ಬೇರಿಸಿದೆ.

ಹೌದು.. ಉತ್ತರ ಪ್ರದೇಶದ ಲಖನೌನಲ್ಲಿ ಜನಸತ್ತಾ ದಳದ ನಾಯಕ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ 'ರಾಜಾ ಭಯ್ಯಾ' ಅವರನ್ನು ರಜನಿಕಾಂತ್ ಭೇಟಿಯಾಗಿದ್ದು, ಸುಮಾರು ಹೊತ್ತಿನ ಚರ್ಚೆ ಬಳಿಕ ಅವರ ಮನೆಯಿಂದ ಹೋಗಿದ್ದಾರೆ ಎಂದು ಹೇಳಲಾಗಿದೆ.

ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ 'ರಾಜಾ ಭಯ್ಯಾ'  ಐಪಿಎಸ್ ಅಧಿಕಾರಿಯ ಕೊಲೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ರೌಡಿ ಶೀಟರ್ ಇತಿಹಾಸ ಹೊಂದಿದ್ದ ರಾಜಕಾರಣಿಯಾಗಿದ್ದಾರೆ.

ಆಗಸ್ಟ್ 19 ರಂದು ರಜನಿಕಾಂತ್ ಲಕ್ನೋಗೆ ಬಂದಿಳಿದಿದ್ದರು. ಲಕ್ನೋದಲ್ಲಿನ ಬಿಜೆಪಿ ನಾಯಕರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸೂಪರ್ ಸ್ಟಾರ್ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದರು. ಆಗಸ್ಟ್ 20 ರಂದು ತಲೈವರ್ ರಜನಿಕಾಂತ್ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು. 

ಆದರೆ ರಜನಿಕಾಂತ್ ಅವರ ಈ ಭೇಟಿ ವಿವಾದ ಮತ್ತು ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com