ಚಂದ್ರಯಾನ-3 ಮಿಷನ್
ದೇಶ
ಚಂದ್ರಯಾನ-3 ಮಿಷನ್ ನಲ್ಲಿದ್ದ ಪ್ರಯಾಣಿಕರಿಗೆ ಅಭಿನಂದನೆ ಸಲ್ಲಿಸಿ ಯಡವಟ್ಟು ಮಾಡಿಕೊಂಡ ರಾಜಸ್ಥಾನ ಸಚಿವ!
ಚಂದ್ರಯಾನ-3 ರ ಯಶಸ್ಸನ್ನು ದೇಶವೇ ಸಂಭ್ರಮಿಸುತ್ತಿದ್ದರೆ, ರಾಜಸ್ಥಾನ ಸಚಿವರೊಬ್ಬರು ಯಡವಟ್ತು ಮಾಡಿಕೊಂಡಿದ್ದಾರೆ.
ಜೈಪುರ: ಚಂದ್ರಯಾನ-3 ರ ಯಶಸ್ಸನ್ನು ದೇಶವೇ ಸಂಭ್ರಮಿಸುತ್ತಿದ್ದರೆ, ರಾಜಸ್ಥಾನ ಸಚಿವರೊಬ್ಬರು ಯಡವಟ್ತು ಮಾಡಿಕೊಂಡಿದ್ದಾರೆ. ಚಂದ್ರಯಾನ-3 ರಲ್ಲಿದ್ದ ಪ್ರಯಾಣಿಕರಿಗೆ ರಾಜಸ್ಥಾನ ಕ್ರೀಡಾ ಸಚಿವ ಅಶೋಕ್ ಚಂದನ ಅಭಿನಂದನೆ ಸಲ್ಲಿಸಿದ್ದಾರೆ.
ಚಂದ್ರನ ಮೇಲ್ಮೈ ಮೇಲೆ ಬಾಹ್ಯಾಕಾಶ ನೌಕೆ ಇಳಿದರೆ, ನಾನು ಪ್ರಯಾಣಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ದೇಶ ವಿಜ್ಞಾನ ಮತ್ತು ಬಾಹ್ಯಾಕಾಶ ಸಂಶೋಧನೆಯಲ್ಲಿ ಒಂದು ಹೆಜ್ಜೆ ಮುಂದಿಟ್ಟಿದೆ. ಇದಕ್ಕಾಗಿ ನಾನು ದೇಶದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ರಾಜಸ್ಥಾನ ಸಚಿವರು ಹೇಳಿದ್ದಾರೆ.
ಚಂದ್ರಯಾನ-3 ಬುಧವಾರ ಸಂಜೆ ಚಂದ್ರನ ಮೇಲೆ ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ್ದು, ಚಂದ್ರನ ಮೇಲ್ಮೈ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ನಾಲ್ಕನೇ ದೇಶ ಮತ್ತು ದಕ್ಷಿಣ ಧ್ರುವವನ್ನು ತಲುಪಿದ ಮೊದಲ ದೇಶವಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ