15ನೇ ಬ್ರಿಕ್ಸ್ ಶೃಂಗಸಭೆ: ಕೋರಿಕೆ ಮೇರೆಗೆ ಮಾತುಕತೆ ಎಂಬ ಚೀನಾ ಹೇಳಿಕೆ ತಿರಸ್ಕರಿಸಿದ ಭಾರತ

15ನೇ ಬ್ರಿಕ್ಸ್ ಶೃಂಗಸಭೆಯ ನಡುವಲ್ಲೇ ಕೋರಿಕೆ ಮೇರೆಗೆ ಭಾರತ-ಚೀನಾ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆದಿದೆ ಎಂಬ ಚೀನಾ ಹೇಳಿಕೆಯನ್ನು ಭಾರತ ಸರ್ಕಾರ ಸಾರಾಸಗಟಾಗಿ ತಳ್ಳಿ ಹಾಕಿದೆ.
ಪ್ರಧಾನಿ ಮೋದಿ ಮತ್ತು ಕ್ಸಿ ಜಿನ್ ಪಿಂಗ್
ಪ್ರಧಾನಿ ಮೋದಿ ಮತ್ತು ಕ್ಸಿ ಜಿನ್ ಪಿಂಗ್

ನವದೆಹಲಿ: 15ನೇ ಬ್ರಿಕ್ಸ್ ಶೃಂಗಸಭೆಯ ನಡುವಲ್ಲೇ ಕೋರಿಕೆ ಮೇರೆಗೆ ಭಾರತ-ಚೀನಾ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆದಿದೆ ಎಂಬ ಚೀನಾ ಹೇಳಿಕೆಯನ್ನು ಭಾರತ ಸರ್ಕಾರ ಸಾರಾಸಗಟಾಗಿ ತಳ್ಳಿ ಹಾಕಿದೆ.

ಚೀನಾ-ಭಾರತ ಮಾತುಕತೆಗಳು ನಂತರದ ಕೋರಿಕೆಯ ಮೇರೆಗೆ ದ್ವಿಪಕ್ಷೀಯ ಮಾತುಕತೆ ನಡೆದವು ಎಂದು ಚೀನಾ ಇತ್ತೀಚೆಗೆ ಮಾಡಿದ ಹೇಳಿಕೆಯನ್ನು ಭಾರತೀಯ ಮೂಲಗಳು ತಳ್ಳಿಹಾಕಿವೆ. ಚೀನಾದ ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, 'ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಆಗಸ್ಟ್ 23, 2023 ರಂದು ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಕೋರಿಕೆಯ ಮೇರೆಗೆ ಮಾತುಕತೆ ನಡೆಸಿದರು ಎಂದು ಹೇಳಿತ್ತು.

ಆದರೆ ಭಾರತೀಯ ವಿದೇಶಾಂಗ ಇಲಾಖೆ ಹೇಳಿಕೆಯನ್ನು ತಿರಸ್ಕರಿಸಿದ್ದು, ದ್ವಿಪಕ್ಷೀಯ ಸಭೆಗಾಗಿ ಚೀನಾದ ಕಡೆಯಿಂದ ವಿನಂತಿಯು ಕೂಡ ಬಾಕಿ ಉಳಿದಿದೆ ಎಂದು ತಿಳಿಸಿವೆ.

ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ಲೀಡರ್ಸ್ ಲಾಂಜ್‌ನಲ್ಲಿ ಅನೌಪಚಾರಿಕ ಸಂಭಾಷಣೆ ನಡೆಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಆದರೆ ಈ ಮಾತುಕತೆ ಪೂರ್ಣ ಪ್ರಮಾಣದ ದ್ವಿಪಕ್ಷೀಯ ಮಾತುಕತೆ ಅಲ್ಲ. ಅದು ಕೇವಲ ಅನೌಪಚಾರಿಕ ಸಂಭಾಷಣೆ ಅಷ್ಟೇ ಎಂದು ಭಾರತ ಹೇಳಿದೆ.

ಜೋಹಾನ್ಸ್‌ಬರ್ಗ್‌ನಲ್ಲಿ ಗುರುವಾರ ಮುಕ್ತಾಯಗೊಂಡ 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ, ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಭಾರತ-ಚೀನಾ ನಡುವಿನ ಮಾತುಕತೆಯ ವಿವರಗಳನ್ನು ಹಂಚಿಕೊಂಡ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ, ಅಧ್ಯಕ್ಷ ಕ್ಸಿ ಅವರೊಂದಿಗಿನ ಸಂವಾದದಲ್ಲಿ ಪ್ರಧಾನಿ ಮೋದಿ ಭಾರತದ ಗಡಿ ಕಾಳಜಿಯನ್ನು ಎತ್ತಿ ತೋರಿಸಿದ್ದಾರೆ. ಬ್ರಿಕ್ಸ್ ಶೃಂಗಸಭೆಯ ಹೊರತಾಗಿ, ಪ್ರಧಾನಮಂತ್ರಿಯವರು ಇತರ ಬ್ರಿಕ್ಸ್ ನಾಯಕರೊಂದಿಗೆ ಸಂವಾದ ನಡೆಸಿದರು.

ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ಸಂವಾದದಲ್ಲಿ, ಭಾರತ-ಚೀನಾದ ಪಶ್ಚಿಮ ವಲಯದಲ್ಲಿ ಎಲ್‌ಎಸಿ ಜೊತೆಗೆ ಬಗೆಹರಿಸಲಾಗದ ಗಡಿ ಪ್ರದೇಶಗಳ ಸಮಸ್ಯೆಗಳ ಕುರಿತು ಭಾರತದ ಕಳವಳಗಳನ್ನು ಪ್ರಧಾನಿ ಮೋದಿ ಎತ್ತಿ ತೋರಿಸಿದರು ಎಂದು ಕ್ವಾತ್ರಾ ಹೇಳಿದರು.

"ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವುದು ಮತ್ತು ಭಾರತ-ಚೀನಾ ಸಂಬಂಧವನ್ನು ಸಾಮಾನ್ಯಗೊಳಿಸಲು LAC ಅನ್ನು ಗಮನಿಸುವುದು ಮತ್ತು ಗೌರವಿಸುವುದು ಅತ್ಯಗತ್ಯ ಎಂದು ಪ್ರಧಾನಿ ಒತ್ತಿ ಹೇಳಿದ್ದು, ಈ ನಿಟ್ಟಿನಲ್ಲಿ, ಇಬ್ಬರು ನಾಯಕರು ತಮ್ಮ ಸಂಬಂಧಿತ ಅಧಿಕಾರಿಗಳಿಗೆ ತ್ವರಿತ ಪ್ರಯತ್ನಗಳನ್ನು ತೀವ್ರಗೊಳಿಸಲು ನಿರ್ದೇಶಿಸಲು ಒಪ್ಪಿಕೊಂಡರು ಎಂದು  ಕ್ವಾತ್ರಾ ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com