ಪಂಜಾಬ್‌: ಟ್ರ್ಯಾಕ್ಟರ್‌ಗೆ ಡಿಕ್ಕಿಯಾಗಿ ಚಾಲಕನ ಸಮೇತ ವಾಹನವನ್ನು 500 ಮೀಟರ್ ಎಳೆದೊಯ್ದ ಟ್ರಕ್

ಟ್ರಕ್ ಮತ್ತು ಟ್ರ್ಯಾಕ್ಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕನನ್ನು ಟ್ರಕ್ 500 ಮೀಟರ್‌ವರೆಗೆ ಎಳೆದೊಯ್ದಿದ್ದು, ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಹೋಶಿಯಾರ್‌ಪುರ: ಟ್ರಕ್ ಮತ್ತು ಟ್ರ್ಯಾಕ್ಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕನನ್ನು ಟ್ರಕ್ 500 ಮೀಟರ್‌ವರೆಗೆ ಎಳೆದೊಯ್ದಿದ್ದು, ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೋಶಿಯಾರ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಮೇಜರ್ ಸಿಂಗ್ ಮಾತನಾಡಿ, ಇಂದು ಬೆಳಗ್ಗೆ ಶಹಪುರ್ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಇದರಿಂದ ಆಕ್ರೋಶಗೊಂಡ ಸಂಬಂಧಿಕರು ಮತ್ತು ಸ್ಥಳೀಯರು ಟ್ರಕ್ ಚಾಲಕನನ್ನು ಬಂಧಿಸುವಂತೆ ಒತ್ತಾಯಿಸಿ ಸುಮಾರು ಆರು ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು.

ಸ್ಟೋನ್ ಕ್ರಷರ್ ತುಂಬಿದ್ದ ಟ್ರಕ್ ಮರಳು ತುಂಬಿದ್ದ ಟ್ರಾಕ್ಟರ್ ಟ್ರೈಲರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಸಂತ್ರಸ್ತ ಸುಖದೇವ್ ಸಿಂಗ್ (21) ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರೂಪನಗರ ಜಿಲ್ಲೆಯ ಭಾಂಗ್ಲಾನ್ ಖೇರಾ ಗ್ರಾಮದ ಸಿಂಗ್, ತಾನೇ ಚಲಾಯಿಸುತ್ತಿದ್ದ ವಾಹನದ ಟೈರ್‌ಗಳ ನಡುವೆ ಸಿಕ್ಕಿಹಾಕಿಕೊಂಡಿದ್ದಾನೆ ಮತ್ತು ವೇಗವಾಗಿ ಬರುತ್ತಿದ್ದ ಟ್ರಕ್ ಟ್ರ್ಯಾಕ್ಟರ್ ಅನ್ನು ಸುಮಾರು 500 ಮೀಟರ್‌ಗಳವರೆಗೆ ಎಳೆದೊಯ್ದಿದೆ ಎಂದು ಅವರು ಹೇಳಿದರು.

ಘಟನೆಯು ಎಷ್ಟು ದುಃಖಕರವಾಗಿತ್ತು ಎಂದರೆ ಸುಖದೇವ್ ಅವರ ದೇಹದ ಭಾಗಗಳು ವಿವಿಧ ದಿಕ್ಕುಗಳಲ್ಲಿ ಚದುರಿಹೋಗಿದ್ದವು. ತರುವಾಯ, ಟ್ರಕ್ ಚಾಲಕನು ತನ್ನ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದರಿಂದ ಆಕ್ರೋಶಗೊಂಡ ಆ ಪ್ರದೇಶದ ನಿವಾಸಿಗಳು ಸುಖದೇವ್ ಅವರ ತಂದೆ ಜಸ್ವಿಂದರ್ ಸಿಂಗ್ ನೇತೃತ್ವದಲ್ಲಿ ಸಂತ್ರಸ್ತನ ಶವವನ್ನು ಅಡ್ಡಾ ಶಹಪುರ ಗ್ರಾಮದಲ್ಲಿ ಇರಿಸಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಆರು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಯಿತು.

ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಎಸ್ಪಿ ಮನೋಜ್ ಸಿಂಗ್ ಸಮಾಧಾನಪಡಿಸಿದ ನಂತರ ಧರಣಿ ಹಿಂಪಡೆದರು. ಆರೋಪಿ ಚಾಲಕನನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com