ಗುಜರಾತಿಗಳು 'ವಂಚಕರು' ಹೇಳಿಕೆ: ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಗೆ ಕೋರ್ಟ್ ಸಮನ್ಸ್

"ಗುಜರಾತಿಗಳು ಮಾತ್ರ ವಂಚಕರು" ಎಂದು ಟೀಕಿಸಿದ್ದಕ್ಕಾಗಿ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದ್ದು, ಈ ಸಂಬಂಧ ಅಹಮದಾಬಾದ್‌ ಮೆಟ್ರೋಪಾಲಿಟನ್...
ತೇಜಸ್ವಿ ಯಾದವ್
ತೇಜಸ್ವಿ ಯಾದವ್
Updated on

ಅಹಮದಾಬಾದ್: "ಗುಜರಾತಿಗಳು ಮಾತ್ರ ವಂಚಕರು" ಎಂದು ಟೀಕಿಸಿದ್ದಕ್ಕಾಗಿ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದ್ದು, ಈ ಸಂಬಂಧ ಅಹಮದಾಬಾದ್‌ ಮೆಟ್ರೋಪಾಲಿಟನ್ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ.

ಪ್ರಕರಣ ಸಂಬಂಧ ಸೆಪ್ಟೆಂಬರ್ 22 ರಂದು ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗುವಂತೆ ತೇಜಸ್ವಿ ಯಾದವ್ ಅವರಿಗೆ ನ್ಯಾಯಾಲಯ ಸೂಚಿಸಿದೆ.

ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಇಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದೆ. 

ಅಹಮದಾಬಾದ್‌ನ ಸಾಮಾಜಿಕ ಕಾರ್ಯಕರ್ತ ಮತ್ತು ಉದ್ಯಮಿ ಹರೇಶ್ ಮೆಹ್ತಾ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ನ್ಯಾಯಾಲಯ ಬಿಹಾರ ಡಿಸಿಎಂಗೆ ಸಮನ್ಸ್ ಜಾರಿ ಮಾಡಿದೆ.

"ನ್ಯಾಯಾಲಯವು ಯಾದವ್ ವಿರುದ್ಧ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ(ಸಿಆರ್‌ಪಿಸಿ) ಸೆಕ್ಷನ್ 202 ರ ಅಡಿಯಲ್ಲಿ ವಿಚಾರಣೆ ನಡೆಸಿದೆ ಮತ್ತು ಹರೇಶ್ ಮೆಹ್ತಾ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಅವರಿಗೆ ಸಮನ್ಸ್ ನೀಡಿದೆ" ಎಂದು ದೂರುದಾರರ ಪರ ವಕೀಲ ಪಿ.ಆರ್.ಪಟೇಲ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com