ಕೋಟಾ ಆತ್ಮಹತ್ಯೆ: ಪೋಷಕರ ಮೇಲಿನ ಸಾಲದ ಹೊರೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ; ರಾಜಸ್ಥಾನ ಸಚಿವ

ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಜಸ್ಥಾನದ ಸಚಿವರು, ಪೋಷಕರ ಮೇಲಿನ ಶಿಕ್ಷಣದ ಸಾಲದ ಹೊರೆಯು ನೀಟ್ ಆಕಾಂಕ್ಷಿಗಳಲ್ಲಿ ಒತ್ತಡಕ್ಕೆ ಒಂದು ಕಾರಣವಾಗಿದ್ದು, ಪೋಷಕರು ಶಿಕ್ಷಣಕ್ಕಾಗಿ ಸಾಲ ಪಡೆಯದಂತೆ ಕೇಂದ್ರವು ನೀತಿಯನ್ನು ರೂಪಿಸಬೇಕು ಎಂದು ಸೋಮವಾರ ಹೇಳಿದ್ದಾರೆ.
ರಾಜಸ್ಥಾನದ ಸಚಿವ ಮಹೇಶ್ ಜೋಶಿ
ರಾಜಸ್ಥಾನದ ಸಚಿವ ಮಹೇಶ್ ಜೋಶಿ
Updated on

ಜೈಪುರ: ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಜಸ್ಥಾನದ ಸಚಿವರು, ಪೋಷಕರ ಮೇಲಿನ ಶಿಕ್ಷಣದ ಸಾಲದ ಹೊರೆಯು ನೀಟ್ ಆಕಾಂಕ್ಷಿಗಳಲ್ಲಿ ಒತ್ತಡಕ್ಕೆ ಒಂದು ಕಾರಣವಾಗಿದ್ದು, ಪೋಷಕರು ಶಿಕ್ಷಣಕ್ಕಾಗಿ ಸಾಲ ಪಡೆಯದಂತೆ ಕೇಂದ್ರವು ನೀತಿಯನ್ನು ರೂಪಿಸಬೇಕು ಎಂದು ಸೋಮವಾರ ಹೇಳಿದ್ದಾರೆ.

ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಭಾನುವಾರ ನಾಲ್ಕು ಗಂಟೆಗಳ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, 2023ರಲ್ಲಿ ಇಲ್ಲಿಯವರೆಗೆ 22 ವಿದ್ಯಾರ್ಥಿಗಳು ತಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವುದೇ ವರ್ಷಕ್ಕೆ ಹೋಲಿಸಿದರೆ ಇದು ಅತ್ಯಧಿಕವಾಗಿದೆ. ಕಳೆದ ವರ್ಷ ಈ ಸಂಖ್ಯೆ 15 ಆಗಿತ್ತು.

'ಅಧ್ಯಯನದ ಒತ್ತಡವಿದೆ. ಇದಲ್ಲದೆ, ತಮ್ಮ ಶಿಕ್ಷಣಕ್ಕಾಗಿ ಸಾಲ ಪಡೆದ ತಮ್ಮ ಪೋಷಕರ ಹೊರೆಯಿಂದಾಗಿ ಹಲವಾರು ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗುತ್ತಾರೆ. ಆದ್ದರಿಂದ, ಅವರು ಪರೀಕ್ಷೆಯಲ್ಲಿ ವಿಫಲರಾದರೆ, ತಮ್ಮ ಪೋಷಕರಿಗೆ ಸಂಕಷ್ಟ ಉಂಟಾಗುತ್ತದೆ ಎನ್ನುವ ಚಿಂತೆ ಅವರನ್ನು ಕಾಡುತ್ತದೆ' ಎಂದು ಸಾರ್ವಜನಿಕ ಆರೋಗ್ಯ ಮತ್ತು ಎಂಜಿನಿಯರಿಂಗ್ ಇಲಾಖೆ (ಪಿಎಚ್ಇಡಿ) ಸಚಿವ ಮಹೇಶ್ ಜೋಶಿ ಜೈಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ಮನೆ ಮತ್ತು ಪೋಷಕರಿಂದ ದೂರ ವಾಸಿಸುತ್ತಿದ್ದಾರೆ ಮತ್ತು ಇದು ಕೂಡ ಅವರ ಮೇಲೆ ಹೆಚ್ಚುವರಿ ಹೊರೆಯಾಗಿ ಆತ್ಮಹತ್ಯೆಗೆ ಕಾರಣವಾಗುತ್ತದೆ ಎಂದು ಹೇಳಿದರು.

'ಕೋಚಿಂಗ್ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನೀತಿ ರೂಪಿಸಬೇಕು. ವಿದ್ಯಾರ್ಥಿಗಳ ಯಶಸ್ಸಿಗೆ ಹೆಚ್ಚಿನ ಒತ್ತಡ ಹೇರುವುದಕ್ಕೆ ಕಾರಣವಾಗುತ್ತಿರುವುದರಿಂದ ಪೋಷಕರು ಶಿಕ್ಷಣಕ್ಕಾಗಿ ಯಾವುದೇ ರೀತಿಯ ಸಾಲ ಮಾಡದಿರುವ ವ್ಯವಸ್ಥೆ ಬರಬೇಕು. ನಾನು ಪರೀಕ್ಷೆಯಲ್ಲಿ ಯಶಸ್ವಿಯಾಗದಿದ್ದರೆ (ನನ್ನ ಕುಟುಂಬಕ್ಕೆ) ಏನಾಗುತ್ತದೆ ಎಂದು ವಿದ್ಯಾರ್ಥಿಗಳು ಯೋಚಿಸುತ್ತಾರೆ. ಏಕೆಂದರೆ, ಅವರ ಪೋಷಕರು ಅವರಿಗೆ ಶಿಕ್ಷಣ ನೀಡಲು ದೊಡ್ಡ ಸಾಲ ಮಾಡಿರುತ್ತಾರೆ' ಎಂದು ಅವರು ಹೇಳಿದರು.

ಎಂಜಿನಿಯರಿಂಗ್‌ಗಾಗಿ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ) ಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ವಾರ್ಷಿಕವಾಗಿ ಎರಡು ಲಕ್ಷ ವಿದ್ಯಾರ್ಥಿಗಳು ಕೋಟಾಕ್ಕೆ ತೆರಳುತ್ತಾರೆ.

ಈ ಹಿಂದೆ, ಕೋಟಾದ ಅಧಿಕಾರಿಗಳು ಹಲವಾರು ಆಕಾಂಕ್ಷಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ತಿಂಗಳ ಕಾಲ ನೀಟ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳ ವಾಡಿಕೆಯ ಪರೀಕ್ಷೆಗಳನ್ನು ನಡೆಸುವುದನ್ನು ಎರಡು ತಿಂಗಳ ಕಾಲ ನಿಲ್ಲಿಸುವಂತೆ ಕೋಚಿಂಗ್ ಸಂಸ್ಥೆಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com