ಡಿಸೆಂಬರ್ 4ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ: ಇಂದು ಸರ್ವಪಕ್ಷ ಸಭೆ

ಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷ ಸಭೆ ಕರೆದಿದೆ. ನಾಡಿದ್ದು ಸೋಮವಾರ ಡಿಸೆಂಬರ್ 4ರಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆಯಲಾಗಿದೆ.
ಹೊಸ ಸಂಸತ್ತು ಭವನ
ಹೊಸ ಸಂಸತ್ತು ಭವನ

ನವದೆಹಲಿ: ಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷ ಸಭೆ ಕರೆದಿದೆ. ನಾಡಿದ್ದು ಸೋಮವಾರ ಡಿಸೆಂಬರ್ 4ರಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆಯಲಾಗಿದೆ.

ಚಳಿಗಾಲ ಅಧಿವೇಶನ ಡಿಸೆಂಬರ್ 22ಕ್ಕೆ ಮುಕ್ತಾಯವಾಗಲಿದೆ. ನಾಳೆ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು ಹೀಗಾಗಿ ಇಂದು ಸರ್ವಪಕ್ಷ ಸಭೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸರ್ವಪಕ್ಷ ಸಭೆ ಕರೆದಿದ್ದಾರೆ. 

ಸಭೆಯಲ್ಲಿ ಕೇಂದ್ರ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಪ್ರಸ್ತುತ, 37 ಮಸೂದೆಗಳು ಸಂಸತ್ತಿನಲ್ಲಿ ಬಾಕಿ ಉಳಿದಿವೆ ಅವುಗಳಲ್ಲಿ 12 ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಮತ್ತು ಏಳು ಮಸೂದೆಗಳು ಪರಿಚಯ, ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿಮಾಡಲಾಗಿದೆ.

ಪ್ರಮುಖ ಮಸೂದೆಗಳನ್ನು ಅಂಗೀಕರಿಸಲು ಸರ್ಕಾರ ಉತ್ಸುಕವಾಗಿರುವ ಅಧಿವೇಶನದ ಮೇಲೆ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಪ್ರಮುಖ ಪ್ರಭಾವ ಬೀರುತ್ತವೆ.ಪಂಚರಾಜ್ಯಗಳ ಚುನಾವಣಾ ಫಲಿತಾಂಶವನ್ನು ಲೋಕಸಭೆ ಚುನಾವಣೆಯ ಸೆಮಿ ಫೈನಲ್ ಎಂದೇ ಕರೆಯಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com