ವಿಧಾನಸಭೆ ಚುನಾವಣೆ ಫಲಿತಾಂಶ: ಅಲ್ಪಸಂಖ್ಯಾತರು ಈಗ ಕಾಂಗ್ರೆಸ್‌ನ ಅಜೆಂಡಾದಲ್ಲಿಲ್ಲ: ಗುಲಾಂ ನಬಿ ಆಜಾದ್

ರಾಜ್ಯದ ಹಳೆಯ ಪಕ್ಷವಾದ ಕಾಂಗ್ರೆಸ್  ಅಜೆಂಡಾದಲ್ಲಿ ಅಲ್ಪಸಂಖ್ಯಾತರ ವಿಷಯವಿಲ್ಲದ ಕಾರಣ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಾಣುತ್ತಿದೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ.
ಗುಲಾಂ ನಬಿ ಆಜಾದ್
ಗುಲಾಂ ನಬಿ ಆಜಾದ್
Updated on

ಶ್ರೀನಗರ: ರಾಜ್ಯದ ಹಳೆಯ ಪಕ್ಷವಾದ ಕಾಂಗ್ರೆಸ್  ಅಜೆಂಡಾದಲ್ಲಿ ಅಲ್ಪಸಂಖ್ಯಾತರ ವಿಷಯವಿಲ್ಲದ ಕಾರಣ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಾಣುತ್ತಿದೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ.

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆಜಾದ್, ದೇಶಾದ್ಯಂತ ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಾಂಗ್ರೆಸ್  ಉಲ್ಲೇಖಿಸಿಲ್ಲ ಎಂದು ತಿಳಿಸಿದರು. 

"ಕಳೆದ 20-25 ದಿನಗಳಲ್ಲಿ ಗಮನಿಸಿದ ಒಂದು ಅಂಶವೆಂದರೆ ಅಲ್ಪಸಂಖ್ಯಾತರ ಚಾಂಪಿಯನ್ ಎಂದು ಪರಿಗಣಿಸಲ್ಪಟ್ಟ ಕಾಂಗ್ರೆಸ್ ಅಲ್ಪಸಂಖ್ಯಾತರ ಬಗ್ಗೆ ಮಾತನಾಡಲಿಲ್ಲ. ಈಗ ಅಲ್ಪಸಂಖ್ಯಾತರು ಕಾಂಗ್ರೆಸ್‌ನ ಅಜೆಂಡಾದಲ್ಲಿಲ್ಲ ಎಂದು ಮಾಜಿ ಕಾಂಗ್ರೆಸ್ ನಾಯಕ ಆಜಾದ್ ಹೇಳಿದರು.

ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೆ ತನ್ನ ಅಧಿಕಾರ ಉಳಿಸಿಕೊಳ್ಳುತ್ತಿದ್ದು, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ನಿಂದ ಅಧಿಕಾರವನ್ನು ಹಿಂತೆಗೆದುಕೊಳ್ಳುವ ಮೂಲಕ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ನ್ನು ಅಧಿಕಾರದಿಂದ ಹೊರಹಾಕುವುದು ನಿಶ್ಚಿತವಾಗಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com