ತೆಲಂಗಾಣ: ಭಾವಿ, ನಿರ್ಗಮಿತ ಸಿಎಂ ಇಬ್ಬರು ಘಟಾನುಘಟಿಗಳನ್ನು ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಯ ಕೆವಿಆರ್!

4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 3 ರಾಜ್ಯಗಳಲ್ಲಿ ಅತಿ ಹೆಚ್ಚು ಸ್ಥಾನದೊಂದಿಗೆ ಅಧಿಕಾರಕ್ಕೆ ಏರಿದೆ. 
ಕಟಿಪಲ್ಲಿ ವೆಂಕಟ ರಮಣ ರೆಡ್ಡಿ
ಕಟಿಪಲ್ಲಿ ವೆಂಕಟ ರಮಣ ರೆಡ್ಡಿ
Updated on

ತೆಲಂಗಾಣ: 4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 3 ರಾಜ್ಯಗಳಲ್ಲಿ ಅತಿ ಹೆಚ್ಚು ಸ್ಥಾನದೊಂದಿಗೆ ಅಧಿಕಾರಕ್ಕೆ ಏರಿದೆ. 

ತೆಲಂಗಾಣದಲ್ಲಿಯೂ ಬಿಜೆಪಿ ತನ್ನ ಸ್ಥಾನಗಳನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 1 ಸ್ಥಾನದಲ್ಲಷ್ಟೇ ಗೆದ್ದಿದ್ದ ಬಿಜೆಪಿ ಈ ಬಾರಿ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. 

ಈ ನಡುವೆ ತೆಲಂಗಾಣದಲ್ಲಿ ಪ್ರತಿಷ್ಠಿತ ಕಮ್ಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕಟಿಪಲ್ಲಿ ವೆಂಕಟ ರಮಣ ರೆಡ್ಡಿ  10 ವರ್ಷಗಳ ಕಾಲ ಸಿಎಂ ಆಗಿದ್ದ ಕೆಸಿಆರ್ ಹಾಗೂ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿರುವ ಕಾಂಗ್ರೆಸ್ ನ ರೇವಂತ್ ರೆಡ್ಡಿ ಅವರನ್ನು ಸೋಲಿಸಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. 

ರೇವಂತ್ ರೆಡ್ಡಿ ಹಾಗೂ ಕೆಸಿಆರ್ ಇಬ್ಬರೂ 2 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಈ ಪೈಕಿ ಕಮ್ಮಾರೆಡ್ಡಿ ಕ್ಷೇತ್ರವೂ ಒಂದಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com