ನವದೆಹಲಿ: ಕಾಂಗ್ರೆಸ್ನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. ಬಿಆರ್ ಎಸ್ ದುರಾಡಳಿತದ ಪರಿಣಾಮ ಕಾಂಗ್ರೆಸ್ ಗೆಲ್ಲುವಂತಾಗಿದೆ ಎಂದು ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿದ್ದ ಪ್ರಹ್ಲಾದ್ಜೋಶಿ ಸುದ್ದಿಗೋಷ್ಠಿಯಲ್ಲಿ ಇಂದು ಹೇಳಿದ್ದಾರೆ.
ರಾಜಸ್ಥಾನದಲ್ಲಿ ಕಾಂಗ್ರೆಸ್ ದುರಾಡಳಿತ ಬಗ್ಗೆ ಜನರಿಗೆ ತಿಳಿಸಿದ್ದೆವು. ಬಿಜೆಪಿಯ ಹಿರಿಯ ನಾಯಕರು ಒಟ್ಟಾಗಿ ಕೆಲಸ ಮಾಡಿದ್ದೆವು. ರಾಜಸ್ಥಾನದಲ್ಲಿ 124ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಮಧ್ಯಪ್ರದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಕೆಲಸ ಮಾಡಿದೆ ಎಂದರು.
ತೆಲಂಗಾಣದಲ್ಲಿ ಬಿಆರ್ಎಸ್ನಿಂದ ಆಪರೇಷನ್ ಭೀತಿ ಹಿನ್ನೆಲೆ ಕರ್ನಾಟಕದಲ್ಲಿ ಕಾಂಗ್ರೆಸ್ನಿಂದ 17 ಜನರನ್ನು ಯಾರು ಕಳಿಸಿದರು ಎಂದು ಕಿಡಿಕಾರಿದರು.
ಸಿದ್ದರಾಮಯ್ಯಗೆ ಕುಮಾರಸ್ವಾಮಿ ಕುಟುಂಬ ಕಂಡರೆ ದ್ವೇಷ ಇದೆ. ಈ ಹಿಂದೆ ಕಾಂಗ್ರೆಸ್ನವರೇ ಶಾಸಕರನ್ನು ಕಳುಹಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ನಿಂದ ಜ್ಯೋತಿರಾದಿತ್ಯ ಏಕೆ ಬಂದರು. ಕಾಂಗ್ರೆಸ್ನಲ್ಲೇ ಆಂತರಿಕ ಸಮಸ್ಯೆ ಇದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ 6 ತಿಂಗಳಲ್ಲೇ ಜಗಳವಾಡುತ್ತಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದರು.
ವಿಜಯೇಂದ್ರ ಭೇಟಿ ಅಭಿನಂದನೆ: ರಾಜಸ್ಥಾನ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದ ಪ್ರಹ್ಲಾದ್ ಜೋಶಿಯವರನ್ನು ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಬಿ ವೈ ವಿಜಯೇಂದ್ರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
Advertisement