ತೆಲಂಗಾಣದಲ್ಲಿ ಕಾಂಗ್ರೆಸ್ ಮುಂಚೂಣಿಯಲ್ಲಿ: ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಪ್ರಭಾವ?

ತೆಲಂಗಾಣದಲ್ಲಿ ಮತ ಎಣಿಕೆ ಆರಂಭವಾಗುತ್ತಿದ್ದಂತೆ, ಅಖಿಲ ಭಾರತ ಕಾಂಗ್ರೆಸ್ ವೀಕ್ಷಕ ಮಾಣಿಕ್ರಾವ್ ಠಾಕ್ರೆ ಅವರು ದೇಶದ ಅತ್ಯಂತ ಹಳೆಯ ಪಕ್ಷವು ದಕ್ಷಿಣ ರಾಜ್ಯದಲ್ಲಿ 70 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ
ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ
Updated on

ಹೈದರಾಬಾದ್: ತೆಲಂಗಾಣದಲ್ಲಿ ಮತ ಎಣಿಕೆ ಆರಂಭವಾಗುತ್ತಿದ್ದಂತೆ, ಅಖಿಲ ಭಾರತ ಕಾಂಗ್ರೆಸ್ ವೀಕ್ಷಕ ಮಾಣಿಕ್ರಾವ್ ಠಾಕ್ರೆ ಅವರು ದೇಶದ ಅತ್ಯಂತ ಹಳೆಯ ಪಕ್ಷವು ದಕ್ಷಿಣ ರಾಜ್ಯದಲ್ಲಿ 70 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು ರಾಜ್ಯದಲ್ಲಿ ನಡೆಸಿದ್ದರು. ಈ ಬಗ್ಗೆ ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಮಾಣಿಕ್ರಾವ್, ನಮ್ಮ ಪಕ್ಷದ ಮುಖ್ಯಸ್ಥರಾದ ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ನೀತಿಗಳ ಬಗ್ಗೆ ಜನರಿಗೆ ಅರ್ಥಮಾಡಿಕೊಟ್ಟಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಪ್ರವಾಸವು ಹೆಚ್ಚಿನ ಪರಿಣಾಮ ಬೀರಿದೆ. ತೆಲಂಗಾಣದಲ್ಲಿ ಸಿಎಂ ಕೆಸಿಆರ್ ರಾಜ ಮತ್ತು ಚಕ್ರವರ್ತಿಯಂತೆ ವರ್ತಿಸಿದರು, ಕಾಂಗ್ರೆಸ್ ತೆಲಂಗಾಣಕ್ಕೆ ರಾಜ್ಯ ಸ್ಥಾನಮಾನವನ್ನು ನೀಡಿತು ಮತ್ತು ಅದು ಉತ್ತಮ ರಾಜ್ಯವಾಗಬೇಕೆಂದು ಎಲ್ಲರೂ ಬಯಸಿದ್ದರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಕನಸು ಈಡೇರುತ್ತದೆ ಎಂದರು. 

ಕಾಂಗ್ರೆಸ್ 70 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು ಎಕ್ಸಿಟ್ ಪೋಲ್‌ಗಳು ಕೂಡ ಅದನ್ನೇ ಹೇಳಿವೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com