ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ಪೈಕಿ ಮೂರು ರಾಜ್ಯಗಳಲ್ಲಿ ಗೆದ್ದು ಬೀಗುತ್ತಿರುವ ಕೇಸರಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.
ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಂಡು, ರಾಜಸ್ಥಾನ ಮತ್ತು ಛತ್ತೀಸ್ ಗಢದಲ್ಲಿ ಪ್ರಮುಖ ಎದುರಾಳಿ ಕಾಂಗ್ರೆಸ್ ನಿಂದ ಅಧಿಕಾರ ಕಸಿದುಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರಲ್ಲಿ ಆತ್ಮವಿಶ್ವಾಸ ಇಮ್ಮಡಿಗೊಂಡಿದ್ದು, ಗೆಲುವಿನ ಖುಷಿಯಲ್ಲಿ ತೇಲುತ್ತಿದ್ದಾರೆ. ಇದು ಇಂದಿನಿಂದ ಆರಂಭವಾದ ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವೂ ಕಂಡುಬಂದಿತು.
ಲೋಕಸಭೆಯಲ್ಲಿ ಮೂರನೇ ಬಾರಿಗೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಸಂಸದರು ಘೋಷಣೆ ಮೊಳಗಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಮೂರನೇ ಬಾರಿಗೆ ಮೋದಿ ಸರ್ಕಾರ, ಬಾರ್ ಬಾರ್ ಮೋದಿ ಸರ್ಕಾರ ಎಂದು ಘೋಷಣೆ ಕೂಗುವ ಮೂಲಕ ಕೇಸರಿ ಸಂಸದರು ಸಂಭ್ರಮಪಟ್ಟರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತಿತರು ಉಪಸ್ಥಿತರಿದ್ದರು.
Advertisement