ಡಿ.17 ಕ್ಕೆ INDIA ಮೈತ್ರಿಕೂಟದ ಸಭೆ ನಿಗದಿ, 2024 ರ ಚುನಾವಣೆಗೆ ಕಾರ್ಯತಂತ್ರದ ಚರ್ಚೆ: ಆರ್ ಜೆಡಿ ನಾಯಕ ಲಾಲು

ವಿಪಕ್ಷಗಳ ಮೈತ್ರಿಕೂಟ INDIA ಸಭೆ ಡಿ.17 ರಂದು ನಡೆಯಲಿರುವುದಾಗಿ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಸ್ಪಷ್ಟಪಡಿಸಿದ್ದಾರೆ. 
INDIA ಮೈತ್ರಿಕೂಟದ ನಾಯಕರು
INDIA ಮೈತ್ರಿಕೂಟದ ನಾಯಕರು
Updated on

ಪಾಟ್ನ: ವಿಪಕ್ಷಗಳ ಮೈತ್ರಿಕೂಟ INDIA ಸಭೆ ಡಿ.17 ರಂದು ನಡೆಯಲಿರುವುದಾಗಿ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಸ್ಪಷ್ಟಪಡಿಸಿದ್ದಾರೆ. 

2024 ರ ಲೋಕಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚಿಸಲು ಡಿ.06 ರಂದು ಸಭೆ ನಡೆಯಬೇಕಿತ್ತು. 

ಆದರೆ ಡಿ.06 ರಂದು ಮಮತಾ ಬ್ಯಾನರ್ಜಿ, ನಿತೀಶ್ ಸೇರಿದಂತೆ ಹಲವು ಪ್ರಮುಖ ನಾಯಕರ ಅಲಭ್ಯತೆಯ ಕಾರಣದಿಂದ ಸಭೆಯನ್ನು ಮುಂದೂಡಲಾಗಿತ್ತು.  ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಲಾಲು ಪ್ರಸಾದ್ ಯಾದವ್, ಸಭೆಯನ್ನು ಡಿ.17 ಕ್ಕೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಮುಖ ನಾಯಕರ ಗೈರು ಸಾಧ್ಯತೆ: INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್
 
ಇನ್ನು ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆಯೂ ಲಾಲು ಪ್ರಸಾದ್ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ದುರ್ಬಲವಾಗಿಲ್ಲ. ಆದರೆ ರಾಜ್ಯಗಳಲ್ಲಿನ ಸ್ಥಳೀಯ ನಾಯಕತ್ವದ ದುರ್ಬಲತೆಯಿಂದಾಗಿ ಚುನಾವಣೆಯಲ್ಲಿ 3 ರಾಜ್ಯಗಳಲ್ಲಿ ಸೋತಿದೆ. ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಸ್ಥಳೀಯ ನಾಯಕತ್ವದೆಡೆಗೆ ಕಾಂಗ್ರೆಸ್ ಹೆಚ್ಚಿನ ಕೆಲಸ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com