ಕೇಂದ್ರ ಸಚಿವರ ರಾಜೀನಾಮೆ: ಅರ್ಜುನ್ ಮುಂಡಾಗೆ ಕೃಷಿ ಇಲಾಖೆ ಹೊಣೆಗಾರಿಕೆ

ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಹಾಗೂ ರೇಣುಕಾ ಸಿಂಗ್ ಸರುತಾ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. 
ಅರ್ಜುನ್ ಮುಂಡಾ
ಅರ್ಜುನ್ ಮುಂಡಾ
Updated on

ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಹಾಗೂ ರೇಣುಕಾ ಸಿಂಗ್ ಸರುತಾ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. 

ಕೃಷಿ ಇಲಾಖೆಯ ಹೊಣೆಗಾರಿಕೆಯನ್ನು ಹೆಚ್ಚುವರಿಯಗಿ ಕೇಂದ್ರ ಸಚಿವ ಅರ್ಜುನ್ ಮುಂಡಾಗೆ ವಹಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ಹೇಳಿದ್ದಾರೆ. 

ಕೇಂದ್ರ ರಾಜ್ಯ ಖಾತೆ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಹೆಚ್ಚುವರಿಯಾಗಿ ಜಲಶಕ್ತಿ ಸಚಿವಾಲಯದ ಹೊಣೆಗಾರಿಕೆ, ಸಚಿವೆ ಶೋಭಾ ಕರಂದ್ಲಾಜೆಗೆ ಆಹಾರ ಸಂಸ್ಕರಣಾ ಉದ್ಯಮಗಳ ಸಚಿವಾಲಯ ಹಾಗೂ ಎಂಒಎಸ್ ಭಾರ್ತಿ ಪ್ರವೀಣ್ ಪವಾರ್ ಗೆ ಹೆಚ್ಚುವರಿಯಾಗಿ ಬುಡಕಟ್ಟುಗಳ ವ್ಯವಹಾರಗಳ ರಾಜ್ಯ ಖಾತೆಯ ಹೊಣೆಗಾರಿಕೆ ನೀಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com