ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡಿ? ಅಮಿತ್ ಶಾಗೆ ಬೇಡಿಕೆ ಇಟ್ಟ ನಿತೀಶ್ ಕುಮಾರ್

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 26ನೇ ಪೂರ್ವ ಪ್ರಾದೇಶಿಕ ಕೌನ್ಸಿಲ್ ಸಭೆಯಲ್ಲಿ ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನದ ಬೇಡಿಕೆಯನ್ನು ಮತ್ತೊಮ್ಮೆ ಪ್ರಸ್ತಾಪಿಸಿದರು.
ನಿತೇಶ್ ಕುಮಾರ್-ಅಮಿತ್ ಶಾ
ನಿತೇಶ್ ಕುಮಾರ್-ಅಮಿತ್ ಶಾ
Updated on

ಪಾಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 26ನೇ ಪೂರ್ವ ಪ್ರಾದೇಶಿಕ ಕೌನ್ಸಿಲ್ ಸಭೆಯಲ್ಲಿ ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನದ ಬೇಡಿಕೆಯನ್ನು ಮತ್ತೊಮ್ಮೆ ಪ್ರಸ್ತಾಪಿಸಿದರು. 

ಇಂದು ಮುಖ್ಯಮಂತ್ರಿಗಳ ಸಚಿವಾಲಯದ ಸಂವಾದದಲ್ಲಿ ನಡೆದ ಈ ಸಭೆಯಲ್ಲಿ, ಬಿಹಾರವು ವಿಶೇಷ ರಾಜ್ಯ ಸ್ಥಾನಮಾನದ ಎಲ್ಲಾ ಷರತ್ತುಗಳನ್ನು ಪೂರೈಸುತ್ತದೆ ಎಂದು ಪ್ರತಿಪಾದಿಸಿದರು. ಈಗ ಜಾತಿ ಆಧಾರಿತ ಜನಗಣತಿಯಲ್ಲಿ ಬಹಿರಂಗವಾಗಿರುವ ಬಡತನ ಮತ್ತು ಹಿಂದುಳಿದವರ ಅಂಕಿಅಂಶಗಳು ಕೂಡ ಇದನ್ನು ಬೆಂಬಲಿಸುತ್ತವೆ. 2010ರಿಂದಲೂ ನಾವು ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸುತ್ತಿದ್ದೇವೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. 

ಬಿಹಾರ ಅತ್ಯಂತ ಐತಿಹಾಸಿಕ ರಾಜ್ಯವಾಗಿದೆ. ನಿರಂತರ ಅಭಿವೃದ್ಧಿಯ ಹೊರತಾಗಿಯೂ, ಅಭಿವೃದ್ಧಿಯ ನಿಯತಾಂಕಗಳಲ್ಲಿ ಬಿಹಾರವು ರಾಷ್ಟ್ರೀಯ ಸರಾಸರಿಗಿಂತ ತುಂಬಾ ಕಡಿಮೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬಿಹಾರಕ್ಕೆ ವಿಶೇಷ ರಾಜ್ಯದ ಸ್ಥಾನಮಾನ ಬಹಳ ಮುಖ್ಯವಾಗಿದೆ. ಅವರು ಖಂಡಿತವಾಗಿಯೂ ದೇಶದಲ್ಲಿ ಜಾತಿ ಗಣತಿ ನಡೆಸುವ ಬಗ್ಗೆ ಮತ್ತು ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡುವ ಬಗ್ಗೆ ಯೋಚಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹೇಳಿದರು.

ಕೇಂದ್ರ ಸರ್ಕಾರವು ಜಾತಿ ಆಧಾರದ ಮೇಲೆ ಜನಗಣತಿ ನಡೆಸಬೇಕೆಂದು ನಾವು ಬಯಸುತ್ತೇವೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದರು. ನಾವು ಮೊದಲಿನಿಂದಲೂ ಇದಕ್ಕಾಗಿ ಪ್ರಯತ್ನಿಸುತ್ತಿದ್ದೆವು. ಇದಕ್ಕಾಗಿ 2019 ಮತ್ತು 2020ರಲ್ಲಿ ಬಿಹಾರ ವಿಧಾನಮಂಡಲದಲ್ಲಿ ಜಾತಿವಾರು ಜನಗಣತಿಗೆ ಪ್ರಸ್ತಾವನೆಯನ್ನು ಸರ್ವಾನುಮತದಿಂದ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿತ್ತು. ನಂತರ ಎಲ್ಲ ಪಕ್ಷಗಳ ಪ್ರತಿನಿಧಿಗಳೊಂದಿಗೆ ಪ್ರಧಾನಿಯನ್ನು ಭೇಟಿ ಮಾಡಿದ್ದೇವೆ. ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ. ಇದೀಗ ರಾಜ್ಯ ಸರ್ಕಾರ ತನ್ನದೇ ಸಂಪನ್ಮೂಲದಿಂದ ಜಾತಿ ಆಧಾರಿತ ಗಣತಿ ನಡೆಸಿದ್ದು, ಅದರ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com