ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಸಿಎಎಫ್ ಯೋಧ ಹುತಾತ್ಮ, ಮತ್ತೋರ್ವರಿಗೆ ಗಾಯ

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿದ್ದು, ದಾಳಿಯಲ್ಲಿ ಸಶಸ್ತ್ರ ಪಡೆ (ಸಿಎಎಫ್) ಯೋಧ ಹುತಾತ್ಮನಾಗಿ, ಮತ್ತೋರ್ವ ಯೋಧನಿಗೆ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿದ್ದು, ದಾಳಿಯಲ್ಲಿ ಸಶಸ್ತ್ರ ಪಡೆ (ಸಿಎಎಫ್) ಯೋಧ ಹುತಾತ್ಮನಾಗಿ, ಮತ್ತೋರ್ವ ಯೋಧನಿಗೆ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಛೋಟೆ ಡೊಂಗರ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮದಾಯಿ ಘಾಟಿ ಕಬ್ಬಿಣದ ಅದಿರು ಗಣಿ ಪ್ರದೇಶದಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಭದ್ರತಾ ಪಡೆಗಳು ಹಾಗೂ ಪೊಲೀಸರು ಜಂಟಿಯಾಗಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಭದ್ರತಾ ಸಿಬ್ಬಂದಿಗಳ ಮೇಲೆ ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ್ದಾರೆ.

ಪರಿಣಾಮ ಘಟನೆಯಲ್ಲಿ ಸಿಎಎಫ್‌ನ 9ನೇ ಬೆಟಾಲಿಯನ್‌ಗೆ ಸೇರಿದ ಕಾನ್‌ಸ್ಟೆಬಲ್ ಕಮಲೇಶ್ ಸಾಹು ಎಂಬುವವರು ಹುತಾತ್ಮರಾಗಿದ್ದಾರೆ. ಮತ್ತೋರ್ವ ಪೇದೆ ವಿನಯ್ ಕುಮಾರ್ ಸಾಹು ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಗೊಂಡಿರುವ ವಿನಯ್ ಅವರನ್ನು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಸ್ಥಳವನ್ನು ಸುತ್ತುವರೆದಿರುವ ಭದ್ರತಾಪಡೆಗಳು ಅಡಗಿ ಕುಳಿತಿರುವ ನಕ್ಸಲರಿಗಾಗಿ ಎನ್ಕೌಂಟರ್ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com