ಲೋಕಸಭೆಗೆ ನುಗ್ಗಿದ ಆರೋಪಿಗಳಿಗೂ ಎಸ್ ಕೆಎಂ, ಬಿಕೆಯುಗೂ ಯಾವುದೇ ಸಂಬಂಧ ಇಲ್ಲ: ರಾಕೇಶ್ ಟಿಕಾಯತ್

ಲೋಕಸಭಾ ಕಲಾಪದ ವೇಳೆ ಭದ್ರತಾ ಲೋಪವಾಗಿದ್ದನ್ನು ಖಂಡಿಸಿದ ರೈತ ನಾಯಕ ರಾಕೇಶ್ ಟಿಕಾಯತ್ ಅವರು, ಮಾಧ್ಯಮದ ಒಂದು ವಿಭಾಗ ವರದಿ ಮಾಡಿದಂತೆ ಆರೋಪಿಗಳೊಂದಿಗೆ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ ಕೆಎಂ) ಅಥವಾ...
ರಾಕೇಶ್ ಟಿಕಾಯತ್
ರಾಕೇಶ್ ಟಿಕಾಯತ್
Updated on

ನವದೆಹಲಿ: ಲೋಕಸಭಾ ಕಲಾಪದ ವೇಳೆ ಭದ್ರತಾ ಲೋಪವಾಗಿದ್ದನ್ನು ಖಂಡಿಸಿದ ರೈತ ನಾಯಕ ರಾಕೇಶ್ ಟಿಕಾಯತ್ ಅವರು, ಮಾಧ್ಯಮದ ಒಂದು ವಿಭಾಗ ವರದಿ ಮಾಡಿದಂತೆ ಆರೋಪಿಗಳೊಂದಿಗೆ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ ಕೆಎಂ) ಅಥವಾ ಭಾರತೀಯ ಕಿಸಾನ್ ಯೂನಿಯನ್‌(ಬಿಕೆಯು) ಯಾವುದೇ ಸಂಬಂಧ ಹೊಂದಿಲ್ಲ ಎಂದು ಬುಧವಾರ ಸ್ಪಷ್ಟಪಡಿಸಿದ್ದಾರೆ.

ರೈತರ ಪ್ರತಿಭಟನೆ, ಮಣಿಪುರ ಬಿಕ್ಕಟ್ಟು, ನಿರುದ್ಯೋಗದಂತಹ ಸಮಸ್ಯೆಗಳಿಂದ ಆಕ್ರೋಶಗೊಂಡು ಈ ಕೃತ್ಯ ಎಸಗಿರುವುದಾಗಿ ಬಂಧಿತ ಆರೋಪಿ ಅಮೋಲ್ ಶಿಂಧೆ ಪೊಲೀಸರ ವಿಚಾರಣೆ ವೇಳೆ ಹೇಳಿರುವುದಾಗಿ ಮೂಲವೊಂದು ಪಿಟಿಐಗೆ ತಿಳಿಸಿದೆ.

ಮತ್ತೋರ್ವ ಆರೋಪಿ ನೀಲಂ ಈ ಹಿಂದೆ ರೈತರ ಪ್ರತಿಭಟನೆ ಸೇರಿದಂತೆ ಹಲವು ಆಂದೋಲನಗಳಲ್ಲಿ ಭಾಗವಹಿಸಿದ್ದರು ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ.

ಹೀಗಾಗಿ ಈ ಬಗ್ಗೆ ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಟಿಕಾಯತ್ ಅವರು, 'ಇಂದು ಸಂಸತ್ತಿನಲ್ಲಿ ನಡೆದ ಘಟನೆ ಅತ್ಯಂತ ಖಂಡನೀಯ. ಸಂಯುಕ್ತ ಕಿಸಾನ್ ಮೋರ್ಚಾ ಹೆಸರಿನಲ್ಲಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿ ಸಂಪೂರ್ಣ ಆಧಾರ ರಹಿತ. SKM ಅಥವಾ BKU ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com