ಸಂಸತ್ ಕಲಾಪ: ಡರೆಕ್ ಒಬ್ರಿಯಾನ್ ಬೆನ್ನಲ್ಲೇ 5 ಲೋಕಸಭಾ ಸದಸ್ಯರ ಅಮಾನತು

ಲೋಕಸಭೆ ಭದ್ರತಾ ಲೋಪ ಪ್ರಕರಣದ ಬೆನ್ನಲ್ಲೇ ಸಂಸತ್ ನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಗದ್ದಲ ಮುಂದುವರೆದಿದ್ದು, ಇದೀಗ ಡರೆಕ್ ಒಬ್ರಿಯಾನ್ ಬೆನ್ನಲ್ಲೇ ಲೋಕಸಭೆಯ 5 ಮಂದಿ ಸದಸ್ಯರನ್ನು ಅಮಾನತು ಮಾಡಲಾಗಿದೆ.
ಲೋಕಸಭಾ ಕಲಾಪ
ಲೋಕಸಭಾ ಕಲಾಪ

ನವದೆಹಲಿ: ಲೋಕಸಭೆ ಭದ್ರತಾ ಲೋಪ ಪ್ರಕರಣದ ಬೆನ್ನಲ್ಲೇ ಸಂಸತ್ ನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಗದ್ದಲ ಮುಂದುವರೆದಿದ್ದು, ಇದೀಗ ಡರೆಕ್ ಒಬ್ರಿಯಾನ್ ಬೆನ್ನಲ್ಲೇ ಲೋಕಸಭೆಯ 5 ಮಂದಿ ಸದಸ್ಯರನ್ನು ಅಮಾನತು ಮಾಡಲಾಗಿದೆ.

ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಸ್ಪೀಕರ್ ಹೆಸರಿಸಿದ ನಂತರ ಲೋಕಸಭೆಯು ಐವರು ಕಾಂಗ್ರೆಸ್ ಸಂಸದರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸುವ ನಿರ್ಣಯವನ್ನು ಗುರುವಾರ ಅಂಗೀಕರಿಸಲಾಯಿತು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಗದ್ದಲದ ನಡುವೆಯೇ ಐವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಮಂಡಿಸಿದರು. "ಈ ಸದನವು ಟಿ ಎನ್ ಪ್ರತಾಪನ್, ಹೈಬಿ ಈಡನ್, ಜೋತಿಮಣಿ, ರಮ್ಯಾ ಹರಿದಾಸ್ ಮತ್ತು ಡೀನ್ ಕುರಿಯಾಕೋಸ್ ಕುರ್ಯಕಸ್ ಅವರ ದುರ್ವರ್ತನೆ ಮೇರೆಗೆ ಹಾಲಿ ಅಧಿವೇಶನದ ಬಾಕಿ ಕಲಾಪಗಳಿಂದ ಅಮಾನತು ಮಾಡಲಾಗಿದೆ ಎಂದು ನಿರ್ಣಯವನ್ನು ಓದಲಾಯಿತು. ಬಿ ಮಹತಾಬ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಭದ್ರತಾ ಲೋಪದ ಹಿನ್ನೆಲೆಯಲ್ಲಿ ಅಮಿತ್ ಶಾ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸಿ ಗದ್ದಲವೇರ್ಪಡಿಸಿದ ನಂತರ ಲೋಕಸಭೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಯಿತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com