ಭದ್ರತೆ ಉಲ್ಲಂಘನೆ ಆರೋಪ: ಸಂಸತ್ತಿನ ಉಭಯ ಸದನಗಳಲ್ಲಿ ತೀವ್ರ ಗದ್ದಲ, ಕೋಲಾಹಲ, ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ

ಸಂಸತ್ತಿನಲ್ಲಿ ಇಬ್ಬರು ಯುವಕರು ಅತಿಕ್ರಮಣ ಪ್ರವೇಶ ಮಾಡಿ ದಾಂಧಲೆ ನಡೆಸಿ ಭದ್ರತಾ ಉಲ್ಲಂಘನೆ ಮಾಡಿರುವ ಘಟನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನದಲ್ಲಿ ಹೇಳಿಕೆ ನೀಡಬೇಕೆಂದು ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಘೋಷಣೆಗಳು ಕೂಗಿ ಗದ್ದಲ, ಕೋಲಾಹಲ ಉಂಟಾಗಿದ್ದರಿಂದ ಶುಕ್ರವಾರ ಸಂಸತ್ತಿನ ಉಭಯ ಸದನಗಳು ಕಲಾಪ ಮುಂದೂಡಲಾಗಿದೆ. 
ಲೋಕಸಭೆಯ ಚಿತ್ರ
ಲೋಕಸಭೆಯ ಚಿತ್ರ

ನವದೆಹಲಿ: ಸಂಸತ್ತಿನಲ್ಲಿ ಇಬ್ಬರು ಯುವಕರು ಅತಿಕ್ರಮಣ ಪ್ರವೇಶ ಮಾಡಿ ದಾಂಧಲೆ ನಡೆಸಿ ಭದ್ರತಾ ಉಲ್ಲಂಘನೆ ಮಾಡಿರುವ ಘಟನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನದಲ್ಲಿ ಹೇಳಿಕೆ ನೀಡಬೇಕೆಂದು ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಘೋಷಣೆಗಳು ಕೂಗಿ ಗದ್ದಲ, ಕೋಲಾಹಲ ಉಂಟಾಗಿದ್ದರಿಂದ ಶುಕ್ರವಾರ ಸಂಸತ್ತಿನ ಉಭಯ ಸದನಗಳು ಕಲಾಪ ಮುಂದೂಡಲಾಗಿದೆ. 

ಇಂದು ಬೆಳಗ್ಗೆ 11 ಗಂಟೆಗೆ ಲೋಕಸಭೆ ಕಲಾಪ ಸೇರುತ್ತಿದ್ದಂತೆಯೇ ಪ್ರತಿಪಕ್ಷಗಳ ಸಂಸದರು ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು. ಅವರಲ್ಲಿ ಹೆಚ್ಚಿನವರು ಕೇಂದ್ರ ಗೃಹ ಸಚಿವರ ರಾಜೀನಾಮೆ ಮತ್ತು ಸದನದಲ್ಲಿ ಅವರ ಉಪಸ್ಥಿತಿಯನ್ನು ಕೋರಿ ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗೆ ನುಗ್ಗಿದರು.

ಎರಡು ದಿನಗಳ ಹಿಂದೆ ನಡೆದ ಭದ್ರತಾ ಲೋಪದ ಬಗ್ಗೆ ಚರ್ಚೆ ನಡೆಸುವಂತೆ ವಿರೋಧ ಪಕ್ಷದ ಸಂಸದರು ಒತ್ತಾಯಿಸುತ್ತಿದ್ದಾರೆ. ಬುಧವಾರ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‌ಗೆ ಜಿಗಿದ ಇಬ್ಬರಿಗೆ ಪಾಸ್‌ಗಳನ್ನು ಅಧಿಕೃತವಾಗಿ ನೀಡಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. 

ಇಂದಿನ ಲೋಕಸಭೆ ಕಲಾಪಗಳ ಅಧ್ಯಕ್ಷತೆ ವಹಿಸಿದ್ದ ರಾಜೇಂದ್ರ ಅಗರವಾಲ್ ಅವರು ಕಲಾಪವನ್ನು ಮುಂದೂಡಲಾಗದೆ ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು. 

ರಾಜ್ಯಸಭೆಯಲ್ಲಿ ಏನಾಯ್ತು?: ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆಯ ಕುರಿತು ಚರ್ಚಿಸಲು ದಿನದ ನಿಗದಿತ ಕಲಾಪವನ್ನು ಬದಿಗೊತ್ತುವಂತೆ ವಿರೋಧ ಪಕ್ಷದ ಸದಸ್ಯರು ನೊಟೀಸ್ ನೀಡಿದ್ದಕ್ಕೆ ಸಭಾಪತಿ ಜಗದೀಪ್ ಧನಕರ್ ತಿರಸ್ಕರಿಸಿದರು. ಇದಕ್ಕೆ ವಿರೋಧ ಪಕ್ಷಗಳ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದರು. ಹೀಗಾಗಿ ಸಭಾಪತಿಗಳು ರಾಜ್ಯಸಭೆ ಕಲಾಪವನ್ನು ಸಹ ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು. 

ಬುಧವಾರ ಸಂಸತ್ತಿನ ಭದ್ರತಾ ಉಲ್ಲಂಘನೆಯಿಂದ ಉದ್ಭವಿಸಿದ 'ಗಂಭೀರ ಪರಿಸ್ಥಿತಿ'ಗೆ ಸಂಬಂಧಿಸಿದಂತೆ 23 ನೋಟಿಸ್‌ಗಳನ್ನು ಸ್ವೀಕರಿಸಲಾಗಿದೆ ಎಂದು ಸಭಾಪತಿ ಸದನಕ್ಕೆ ತಿಳಿಸಿದರು. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಮತ್ತು ಅದನ್ನು ತಾರ್ಕಿಕ ತೀರ್ಮಾನಕ್ಕೆ ಕೊಂಡೊಯ್ಯಲಾಗುವುದು ಎಂದು ಜಗದೀಪ್ ಧನ್ ಕರ್ ತಿಳಿಸಿದರು. 

ಡಿಸೆಂಬರ್ 22 ರಂದು ಮುಕ್ತಾಯಗೊಳ್ಳಲಿರುವ ಚಳಿಗಾಲದ ಅಧಿವೇಶನದ ಉಳಿದ ಭಾಗಕ್ಕಾಗಿ ತೃಣಮೂಲ ಕಾಂಗ್ರೆಸ್ ಸದಸ್ಯ ಡೆರೆಕ್ ಒ'ಬ್ರೇನ್ ಅವರನ್ನು ಸದನದಿಂದ ಅಮಾನತುಗೊಳಿಸುವ ವಿಷಯವನ್ನು ಕೆಲವು ವಿರೋಧ ಪಕ್ಷಗಳು ಪ್ರಸ್ತಾಪಿಸಿದವು. ಪ್ರತಿಭಟನೆಯ ನಡುವೆ ಸಭಾಪತಿಯವರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com