ಖರ್ಗೆ ಪರ್ಗೆ ಎಲ್ಲಾ ಯಾರು?: INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಪ್ರಸ್ತಾವನೆ ಬಗ್ಗೆ ಜೆಡಿಯು ಶಾಸಕ ಟೀಕೆ

ಲೋಕಸಭಾ ಚುನಾವಣೆ-2024 ರ ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು ಮೋದಿ ವಿರುದ್ಧ INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆಯಾಗಬೇಕೆಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 
ಮಲ್ಲಿಕಾರ್ಜುನ ಖರ್ಗೆ- ನಿತೀಶ್ ಕುಮಾರ್
ಮಲ್ಲಿಕಾರ್ಜುನ ಖರ್ಗೆ- ನಿತೀಶ್ ಕುಮಾರ್

ನವದೆಹಲಿ: ಲೋಕಸಭಾ ಚುನಾವಣೆ-2024 ರ ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು ಮೋದಿ ವಿರುದ್ಧ INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆಯಾಗಬೇಕೆಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

ಈ ಬಗ್ಗೆ ಜೆಡಿಯು ಶಾಸಕ ಗೋಪಾಲ್ ಮಂಡಲ್ ಪ್ರತಿಕ್ರಿಯೆ ನೀಡಿದ್ದು, ಸಾಮಾನ್ಯ ಜನಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ತಿಳಿದಿಲ್ಲ, ಬಿಹಾರ ಸಿಎಂ ನಿತೀಶ್ ಕುಮಾರ್ INDIA ದ ಪ್ರಧಾನಿ ಅಭ್ಯರ್ಥಿಯಾಗಬೇಕು ಎಂದು ಹೇಳಿದ್ದಾರೆ.
 
ಜನಸಾಮಾನ್ಯರಿಗೆ ಖರ್ಗೆ ಪರ್ಗೆ ಯಾರೂ ಗೊತ್ತಿಲ್ಲ. ಅವರು ಕಾಂಗ್ರೆಸ್ ನ ಅಧ್ಯಕ್ಷರೆಂಬುದು ನನಗೂ ಗೊತ್ತಿರಲಿಲ್ಲ. ಅವರು ಯಾರೆಂಬುದು ಯಾರಿಗೂ ಗೊತ್ತಿಲ್ಲ. ಆದರೆ ಸಾರ್ವಜನಿಕರಿಗೆ ನಿತೀಶ್ ಕುಮಾರ್ ಯಾರೆಂಬುದು ಗೊತ್ತು. ನಿತೀಶ್ ಕುಮಾರ್ ಪ್ರಧಾನಿಯಾಗಬೇಕು. ಅವರು ಭಾರತದಾದ್ಯಂತ ಜನಪ್ರಿಯರಾಗಿದ್ದಾರೆ, ”ಎಂದು ಮಂಡಲ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com