ತೇಜಸ್ವಿ ಯಾದವ್‌ಗೆ ಇಡಿಯಿಂದ ಮತ್ತೆ ಸಮನ್ಸ್: ಜನವರಿ 5ಕ್ಕೆ ವಿಚಾರಣೆಗೆ ಹಾಜರಾಗಲು ಸೂಚನೆ

ಉದ್ಯೋಗಕ್ಕಾಗಿ ರೈಲ್ವೆ ಜಮೀನು ಹಗರಣ ಪ್ರಕರಣದಲ್ಲಿ ಬಿಹಾರದ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ ಶನಿವಾರ ಮತ್ತೆ ಸಮನ್ಸ್ ಜಾರಿ ಮಾಡಿದ್ದು, ಜನವರಿ 5 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ತೇಜಸ್ವಿ ಯಾದವ್
ತೇಜಸ್ವಿ ಯಾದವ್

ನವದೆಹಲಿ: ಉದ್ಯೋಗಕ್ಕಾಗಿ ರೈಲ್ವೆ ಜಮೀನು ಹಗರಣ ಪ್ರಕರಣದಲ್ಲಿ ಬಿಹಾರದ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ ಶನಿವಾರ ಮತ್ತೆ ಸಮನ್ಸ್ ಜಾರಿ ಮಾಡಿದ್ದು, ಜನವರಿ 5 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಹಿಂದೆ ಡಿಸೆಂಬರ್ 22 ರಂದು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ ಇಡಿ ಸಮನ್ಸ್ ದಿನನಿತ್ಯದ ವ್ಯವಹಾರ ಅಂತಾ ಹೇಳಿ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಲಾಲು ಪ್ರಸಾದ್ ಯಾದವ್ ಅವರು ಯುಪಿಎ-1ರ ಅವಧಿಯಲ್ಲಿ ರೈಲ್ವೇ ಸಚಿವರಾಗಿದ್ದ ಅವಧಿಯಲ್ಲಿ ನಡೆದಿದ್ದ ಹಗರಣ ಇದಾಗಿದೆ.

2004 ರಿಂದ 2009 ರವರೆಗೆ ಆಗಿನ ರೈಲ್ವೆ ಸಚಿವ ಪ್ರಸಾದ್ ಅವರ ಕುಟುಂಬ ಸದಸ್ಯರಿಗೆ ಮತ್ತು ಎ ಕೆ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಕಂಪನಿಗೆ ಭೂಮಿಯನ್ನು ವರ್ಗಾಯಿಸಿದ ನಂತರ ಹಲವಾರು ಜನರಿಗೆ ವಿವಿಧ ರೈಲ್ವೇ ವಲಯಗಳಲ್ಲಿ ಗ್ರೂಪ್ 'ಡಿ' ವರ್ಗದ ಉದ್ಯೋಗಗಳನ್ನು ಹಸ್ತಾಂತರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com