'ಅನಧಿಕೃತ' ಘಟಿಕೋತ್ಸವ: ಜಾದವ್‌ಪುರ ವಿಶ್ವವಿದ್ಯಾಲಯದ ಹಂಗಾಮಿ ಉಪಕುಲಪತಿಯನ್ನು ಕಿತ್ತೆಸೆದ ಬಂಗಾಳ ರಾಜ್ಯಪಾಲರು!

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ್ ಬೋಸ್ ಅವರು ಶನಿವಾರ ಸಂಜೆ ಜಾದವ್‌ಪುರ ವಿಶ್ವವಿದ್ಯಾಲಯದ ಹಂಗಾಮಿ ಉಪಕುಲಪತಿ ಬುದ್ಧದೇವ್ ಸಾವೊ ಅವರನ್ನು ಅಶಿಸ್ತಿನ ಆಧಾರದ ಮೇಲೆ ಹುದ್ದೆಯಿಂದ ತೆಗೆದುಹಾಕಿದ್ದಾರೆ.
ಜಾದವ್‌ಪುರ ವಿಶ್ವವಿದ್ಯಾಲಯ
ಜಾದವ್‌ಪುರ ವಿಶ್ವವಿದ್ಯಾಲಯ
Updated on

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ್ ಬೋಸ್ ಅವರು ಶನಿವಾರ ಸಂಜೆ ಜಾದವ್‌ಪುರ ವಿಶ್ವವಿದ್ಯಾಲಯದ ಹಂಗಾಮಿ ಉಪಕುಲಪತಿ ಬುದ್ಧದೇವ್ ಸಾವೊ ಅವರನ್ನು ಅಶಿಸ್ತಿನ ಆಧಾರದ ಮೇಲೆ ಹುದ್ದೆಯಿಂದ ತೆಗೆದುಹಾಕಿದ್ದಾರೆ. 

ಭಾನುವಾರ ನಡೆಯಲಿದ್ದು ವಿಶ್ವವಿದ್ಯಾಲಯದ ಘಟಿಕೋತ್ಸವದ ಮುನ್ನಾದಿನದಂದು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಜಭವನದ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ. ಪ್ರೊಫೆಸರ್ ಬುದ್ಧದೇಬ್ ಸಾವೊ ಅವರಿಗೆ 2023ರ ಆಗಸ್ಟ್ 17ರ ಆದೇಶ ಸಂಖ್ಯೆ CU/WB/22/23 ರ ಮುಂದಿನ ಆದೇಶದವರೆಗೆ ಜಾದವ್‌ಪುರ ವಿಶ್ವವಿದ್ಯಾಲಯದ ಉಪಕುಲಪತಿಗಳ ಕಚೇರಿಯ ಅಧಿಕಾರಗಳನ್ನು ಚಲಾಯಿಸುವ ಮತ್ತು ಕರ್ತವ್ಯಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹಿಂಪಡೆಯಲಾಗಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿ ವರ್ಷ ಡಿಸೆಂಬರ್ 24ರಂದು ನಡೆಯುತ್ತಿದ್ದ ಘಟಿಕೋತ್ಸವ ಸಮಾರಂಭದಲ್ಲಿ ಈ ಬಾರಿ ಅನಿಶ್ಚಿತತೆಯ ವಾತಾವರಣ ನಿರ್ಮಾಣವಾಗಿದ್ದು, ಕಾರ್ಯಕ್ರಮದ ಆತಿಥ್ಯ ವಹಿಸಲು ನಿರ್ಣಾಯಕವಾಗಿರುವ ನ್ಯಾಯಾಲಯದ ಸಭೆ ನಡೆಸಲು ವಿಶ್ವವಿದ್ಯಾಲಯಕ್ಕೆ ರಾಜ್ಯಪಾಲರು ಅವಕಾಶ ನೀಡಲಿಲ್ಲ. 'ಅನಧಿಕೃತ' ಘಟಿಕೋತ್ಸವಕ್ಕೆ ತಮ್ಮ ಪಾಲಕರು ಕಷ್ಟಪಟ್ಟು ದುಡಿದ ಹಣವನ್ನು ವ್ಯಯಿಸಬೇಕಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ ಎಂದು ಗವರ್ನರ್ ಬೋಸ್ ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ, ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾನಿಲಯವು ಮೊದಲ ವರ್ಷದ ವಿದ್ಯಾರ್ಥಿ ಸ್ವರ್ಣದೀಪ್ ಕುಂದು ವಿಶ್ವವಿದ್ಯಾಲಯದ ಹಾಸ್ಟೆಲ್ ಬಾಲ್ಕನಿಯಿಂದ ಬಿದ್ದು ಸಾವನ್ನಪ್ಪಿದ್ದು ಹೆಚ್ಚು ಸುದ್ದಿಯಾಗಿತ್ತು. ರ್ಯಾಗಿಂಗ್‌ಗೆ ಬಲಿಯಾಗಿದ್ದಾನೆ ಎಂದು ಅವರ ಕುಟುಂಬದವರು ಆರೋಪಿಸಿದ್ದರು. ಈ ಘಟನೆಯನ್ನು ಖಂಡಿಸಿ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com