ತೆಲಂಗಾಣ: ಭೀಕರ ಅಪಘಾತದಲ್ಲಿ ಯಾದಗಿರಿಯ ಮೂವರು ಸೇರಿ ಐವರ ಸಾವು!

ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಐವರು ಮೃತಪಟ್ಟಿರುವ ಘಟನೆ ತೆಲಂಗಾಣದ ನಾರಾಯಣ ಪೇಟೆ ಜಿಲ್ಲೆಯ ಮಕ್ತಲ್ ತಾಲೂಕಿನ ಜಕ್ಲೆರ್ ಗ್ರಾಮದ ಬಳಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಯಾದಗಿರಿ: ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಐವರು ಮೃತಪಟ್ಟಿರುವ ಘಟನೆ ತೆಲಂಗಾಣದ ನಾರಾಯಣ ಪೇಟೆ ಜಿಲ್ಲೆಯ ಮಕ್ತಲ್ ತಾಲೂಕಿನ ಜಕ್ಲೆರ್ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಯಾದಗಿರಿ ತಾಲೂಕಿನ ಸೈದಾಪುರ ಗ್ರಾಮದ ಮೌಲಾಲಿ, ಖಲೀಲ್ ಹಾಗೂ ಬಸಮ್ಮ ಮತ್ತು ಮಹಾರಾಷ್ಟ್ರ ಮೂಲದ ತಾಯಿ-ಮಗಳಾದ ಪ್ರಬೀತಾ, ಅಸ್ಮಿತಾ (7) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಕ್ತಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com