ಶಕ್ತಿಕಾಂತ್ ದಾಸ್, ನಿರ್ಮಲಾ ಸೀತಾರಾಮನ್ ರಾಜಿನಾಮೆ ನೀಡಬೇಕು, ಇಲ್ಲ 11 ಸ್ಥಳಗಳಲ್ಲಿ ಸ್ಫೋಟ: ಆರ್ ಬಿಐಗೆ ಬೆದರಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ಮುಖ್ಯಸ್ಥ ಶಕ್ತಿಕಾಂತ್ ದಾಸ್ ಮತ್ತು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡಲೇ ರಾಜಿನಾಮೆ ನೀಡದಿದ್ದರೆ ದೇಶದ 11 ಪ್ರದೇಶಗಳಲ್ಲಿ ಸ್ಫೋಟ ನಡೆಸುವುದಾಗಿ ಬೆದರಿಕೆ ಇ-ಮೇಲ್ ಬಂದಿದೆ.
ಶಕ್ತಿಕಾಂತ್ ದಾಸ್ ಮತ್ತು ನಿರ್ಮಲಾ ಸೀತಾರಾಮನ್
ಶಕ್ತಿಕಾಂತ್ ದಾಸ್ ಮತ್ತು ನಿರ್ಮಲಾ ಸೀತಾರಾಮನ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮುಖ್ಯಸ್ಥ ಶಕ್ತಿಕಾಂತ್ ದಾಸ್ ಮತ್ತು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡಲೇ ರಾಜಿನಾಮೆ ನೀಡದಿದ್ದರೆ ದೇಶದ 11 ಪ್ರದೇಶಗಳಲ್ಲಿ ಸ್ಫೋಟ ನಡೆಸುವುದಾಗಿ ಬೆದರಿಕೆ ಇ-ಮೇಲ್ ಬಂದಿದೆ.

ಆರ್‌ಬಿಐ, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಕಚೇರಿಗಳ ಮೇಲೆ ಬಾಂಬ್​ ದಾಳಿ ನಡೆಸಲಾಗುವುದು… ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ಗೆ ಸೋಮವಾರ ಬಾಂಬ್ ಸ್ಫೋಟ ಬೆದರಿಕೆಯ ಇ-ಮೇಲ್ ಬಂದಿದೆ. ಬೆದರಿಕೆ ಇ- ಮೇಲ್ ಕಳುಹಿಸಿದವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ 1:30ಕ್ಕೆ ಮುಂಬೈನ 11 ಸ್ಥಳಗಳಲ್ಲಿ ಒಟ್ಟು 11 ಬಾಂಬ್ ದಾಳಿಗಳು ನಡೆಯಲಿವೆ ಎಂದು ಇ- ಮೇಲ್ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಇ-ಮೇಲ್‌ನಲ್ಲಿ ಉಲ್ಲೇಖಿಸಲಾದ ಎಲ್ಲಾ ಸ್ಥಳಗಳಿಗೆ ಪೊಲೀಸರು ಭೇಟಿ ನೀಡಿ ತನಿಖೆಯನ್ನೂ ಕೈಗೊಂಡಿದ್ದಾರೆ. ಆದರೆ, ಬಾಂಬ್​ ಬೆದರಿಕೆ ಕುರಿತಂತೆ ಏನೂ ಕಂಡುಬಂದಿಲ್ಲ.

khilafat.india@gmail.com ಎಂಬ ಇ-ಮೇಲ್​ ಐಡಿ ಮೂಲಕ ಬೆದರಿಕೆ ಬಂದಿತ್ತು. ಮುಂಬೈನ ಎಂಆರ್‌ಎ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದೆ.

ಇ-ಮೇಲ್ ಜಾಡು ಹಿಡಿದಿ ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com