ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭಾನುವಾರ ಮುಂಜಾನೆ ಛತ್ರಪತಿ ಸಂಭಾಜಿನಗರದ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸಾವಿಗೀಡಾದ ಆರು ಜನರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿರುವ ಅಗ್ನಿಶಾಮಕ ದಳದ ಸಿಬ್ಬಂದಿ
ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿರುವ ಅಗ್ನಿಶಾಮಕ ದಳದ ಸಿಬ್ಬಂದಿ
Updated on

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭಾನುವಾರ ಮುಂಜಾನೆ ಛತ್ರಪತಿ ಸಂಭಾಜಿನಗರದ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸಾವಿಗೀಡಾದ ಆರು ಜನರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ವಾಲುಜ್ ಕೈಗಾರಿಕಾ ಪ್ರದೇಶದಲ್ಲಿನ ಸನ್‌ಶೈನ್ ಎಂಟರ್‌ಪ್ರೈಸಸ್ ಘಟಕದಲ್ಲಿ ಮಧ್ಯರಾತ್ರಿ 1 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಹದಿಮೂರು ಕಾರ್ಮಿಕರು ಒಳಗೆ ಮಲಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೈಗವಸುಗಳನ್ನು ತಯಾರಿಸುವ ಘಟಕದ ಛಾವಣಿಯನ್ನು ಒಡೆದು ಏಳು ಮಂದಿ ಬೆಂಕಿಯಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದರೆ. ಇನ್ನುಳಿದ ಆರು ಮಂದಿ ಸಜೀವ ದಹನವಾಗಿದ್ದಾರೆ ಎಂದು ಅವರು ಹೇಳಿದರು.

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ನೀಡುವಂತೆ ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಭರಿಸುವಂತೆ ಶಿಂಧೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆ ತಿಳಿಸಿದೆ.

ಘಟನೆಯಲ್ಲಿನ ಜೀವಹಾನಿಗಾಗಿ ಅವರು ದುಃಖ ವ್ಯಕ್ತಪಡಿಸಿದ್ದಾರೆ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಬೆಳಗಿನ ಜಾವ 3.30ಕ್ಕೆ ಬೆಂಕಿ ನಂದಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com